ಇನ್ನು ಕೊನೆಯ ದಿನವಾದ ಇಂದು ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸುವ ನಿರೀಕ್ಷೆ ಇದ್ದು, ಇದೇ ಕಾರಣಕ್ಕೆ ಭದ್ರತೆ ಕೂಡ ಹೆಚ್ಚಳ ಮಾಡಲಾಗಿದೆ. ಈ ಬಗ್ಗೆ ಮಾತನಾಡಿರುವ ಉತ್ತರ ಪ್ರದೇಶ ಪೊಲೀಸ್ ಮಹಾನಿರ್ದೇಶಕ ಒ.ಪಿ.ಸಿಂಗ್ ಅವರು, 'ಕೊನೆಯ ದಿನ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸುಮಾರು 20,000 ಪೊಲೀಸ್ ಸಿಬ್ಬಂದಿ, 6,000 ಹೋಮ್ಗಾರ್ಡ್ಸ್, 40 ಪೊಲೀಸ್ ಠಾಣೆಗಳು, 58 ಹೊರ ಠಾಣೆಗಳು, ಕೇಂದ್ರ ಮೀಸಲು ಪಡೆಯ 80 ತುಕಡಿಗಳು ಮತ್ತು ಪಿಎಸಿಯ 20 ತುಕುಡಿಗಳನ್ನು ನಿಯೋಜಿಸಲಾಗಿದೆ'' ಎಂದು ತಿಳಿಸಿದ್ದಾರೆ.