ದೆಹಲಿಯಲ್ಲಿ ಇಂದು ಏರ್ಪಡಿಸಲಾಗಿರುವ ಇಂಡೋ ಪೆಸಿಫಿಕ್ ರೀಜಿನಲ್ ಡಯಾಲೋಗ್ ಸಮಾವೇಶದಲ್ಲಿ ಮಾತನಾಡಿದ ಅವರು, 'ಭಾರತದ ವಿರುದ್ಧ ಸಮುದ್ರ ಮೂಲಕ ಭಯೋತ್ಪಾದಕ ದಾಳಿ ನಡೆಸಲು ಉಗ್ರರಿಗೆ ತರಬೇತಿ ನೀಡಲಾಗುತ್ತಿದೆ. ಪಾಕ್ ಮೂಲದ ಉಗ್ರರು ಹಿಂದೆ 2008ರಲ್ಲಿ ಮುಂಬಯಿ ಮೇಲೆ ನಡೆಸಿದ್ದ 26/11ರ ಉಗ್ರ ದಾಳಿಯ ರೀತಿ ಸಮುದ್ರ ಮೂಲಕ 'ಸಮುಂದರೀ ಜಿಹಾದ್' ರೂಪದಲ್ಲಿ ಉಗ್ರ ದಾಳಿ ನಡೆಸುವುದಕ್ಕೆ ಭಯೋತ್ಪಾದಕರಿಗೆ ತರಬೇತಿ ನೀಡಲಾಗುತ್ತಿದೆ ಮತ್ತು ಇದು ಅತ್ಯಂತ ಅಪಾಯಕಾರಿಯೂ ಸವಾಲಿನದ್ದೂ ಆಗಿದೆ ಎಂದು ಹೇಳಿದರು.