ಈ ಪ್ರಕರಣ ಕೇವಲ ಜಾಗಕ್ಕೆ ಸಂಬಂಧಪಟ್ಟಿದ್ದಲ್ಲ. ಎರಡು ಧರ್ಮದ ಜನರ ಭಾವನೆಯ ನಡುವಿನ ಸಮಸ್ಯೆಯೂ ಇದಾಗಿದೆ. ಹಿಂದೆ ಏನಾಗಿತ್ತು, ಯಾವ ರಾಜ ಆಗಿದ್ದ, ಆತ ದೇವಸ್ಥಾನ ಕಟ್ಟಿಸಿದ್ದನೋ, ಮಸೀದಿ ಕಟ್ಟಿಸಿದ್ದನೋ ಎಂಬುದರ ಬಗ್ಗೆ ನಮಗೆ ನಿಯಂತ್ರಣವಿರಲಿಲ್ಲ. ಆಗಿದ್ದು ಆಗಿಹೋಗಿದೆ. ಆದರೆ, ಈಗ ಏನಾಗುತ್ತಿದೆ ಎಂಬುದರ ಬಗ್ಗೆ ನಾವು ಯೋಚಿಸಬೇಕು. ಸಮಸ್ಯೆಯನ್ನು ಬಗೆಹರಿಸುವುದು ಹೇಗೆಂಬುದಷ್ಟೇ ನಮ್ಮ ಕಳಕಳಿ ಎಂದು ನ್ಯಾಯಪೀಠ ವಿಚಾರಣೆ ವೇಳೆ ಹೇಳಿದೆ.