ನವದೆಹಲಿ: 2019ರ ಕುಂಭಮೇಳವನ್ನು ಯಶಸ್ವಿಗೊಳಿಸಿದ್ದಕ್ಕೆ ಉತ್ತರ ಪ್ರದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಜನತೆ ಅದರಲ್ಲೂ ಪ್ರಯಾಗ್ ರಾಜ್ ನ ಜನತೆ ಹಾಗೂ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸರ್ಕಾರದ ಅಡಿಯಲ್ಲಿ ಇಡೀ ಕಾರ್ಯಕ್ರಮ ಸುಸೂತ್ರವಾಗಿ ನಡೆದಿದೆ ಎಂದು ಪ್ರದಾನಿ ಮೋದಿ ಮೆಚ್ಚುಗೆ ವ್ಯಕ್ತ ಪಡಿಸಿ ಟ್ವೀಟ್ ಮಾಡಿದ್ದಾರೆ.
ಕುಂಭ ಮೇಳ ನಮ್ಮ ಸಂಸ್ಕೃತಿಯ ಪ್ರತೀಕವಾಗಿದೆ, ನಮ್ಮ ಆದ್ಯಾತ್ಮಿಕ ನೆಲೆಯಲ್ಲಿ ನಡೆದ ಈ ಕುಂಭಮೇಳ ಮುಂದಿನ ಹಲವು ವರ್ಷಗಳ ವರೆಗೂ ನೆನಪಿನಲ್ಲಿರುತ್ತದೆ ಎಂದು ಹೇಳಿದ್ದಾರೆ.