ಜಮ್ಮು ಬಸ್ ನಿಲ್ದಾಣದಲ್ಲಿ ಗ್ರೆನೇಡ್ ಸ್ಫೋಟಿಸಿದ್ದ ಉಗ್ರನನ್ನು ಪೊಲೀಸರು ಕೆಲವೇ ಗಂಟೆಯಲ್ಲಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯಾಸಿನ್ ಭಟ್ ಬಂಧಿತ ಉಗ್ರ. ಈತ ನಿಷೇಧಿತ ಹಿಜ್ಬುಲ್ ಮುಜಾಹಿದೀನ್ ಭಯೋತ್ಪಾದನಾ ಸಂಘಟನೆಗೆ ಸೇರಿದವನಾಗಿದ್ದಾನೆ. ಘಟನೆ ಬಗ್ಗೆ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಜಮ್ಮು ಕಾಶ್ಮೀರ ಪೊಲೀಸ್ ಐಜಿಪಿ ಮನೀಷ್ ಕೆ ಸಿನ್ಹಾ ಮಾಹಿತಿ ನೀಡಿದ್ದಾರೆ. ಕುಲ್ವಾಮ್ ಜಿಲ್ಲೆಯ ಹಿಜ್ಬುಲ್ಮುಜಾಹಿದೀನ್ ಜಿಲ್ಲಾ ಕಮಾಂಡರ್ ಫರೂಕ್ ಅಹ್ಮದ್ ಭಟ್ ಅಲಿಯಾಸ್ ಓಮರ್, ಯಾಸಿರ್ ಭಟ್ಗೆ ಗ್ರೆನೇಡ್ ದಾಳಿ ನಡೆಸಿಲು ಸೂಚನೆ ನೀಡಿದ್ದಾಗಿ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಘಟನೆಯಲ್ಲಿ ಒಬ್ಬ ಸಾವನ್ನಪ್ಪಿದ್ದು, 33 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಸ್ ನಿಲ್ದಾಣದಲ್ಲಿ ನಡೆದ ದಾಳಿಯಲ್ಲಿ ಮೃತಪಟ್ಟವನನ್ನು 17 ವರ್ಷದ ಮೊಹಮ್ಮದ್ ಶರೀಕ್ ಎಂದು ಗುರುತಿಸಲಾಗಿದೆ.