ಜಮ್ಮು-ಕಾಶ್ನೀರ: ಕಣಿವೆ ರಾಜ್ಯ ಜಮ್ಮು- ಕಾಶ್ಮೀರ ಆಸೆಂಬ್ಲಿ ಚುನಾವಣೆಯನ್ನು ಲೋಕಸಭೆ ಚುನಾವಣೆ ಜೊತೆಗೆ ನಡೆಸದಿರುವುದರಿಂದ ಪ್ರಧಾನಿ ಮೋದಿ ಪಾಕಿಸ್ತಾನ, ಉಗ್ರರು ಹಾಗೂ ಪ್ರತ್ಯೇಕತವಾದಿಗಳ ಮುಂದೆ ಶರಣಾಗಿದ್ದಾರೆ ಎಂದು ನ್ಯಾಷನಲ್ ಕಾನ್ಪರೆನ್ಸ್ ಮುಖಂಡ ಒಮರ್ ಅಬ್ದುಲ್ಲಾ ಟೀಕಿಸಿದ್ದಾರೆ.
ಜಮ್ಮು- ಕಾಶ್ಮೀರ ಸೇರಿದಂತೆ ದೇಶಾದ್ಯಂತ ಏಳು ಹಂತಗಳಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ವೇಳಾಪಟ್ಟಿ ಘೋಷಿಸಿದೆ. ಆದರೆ, ಭದ್ರತೆ ಕಾರಣ ಜಮ್ಮು ಮತ್ತು ಕಾಶ್ಮೀರ ಆಸೆಂಬ್ಲಿ ಚುನಾವಣೆಯನ್ನು ಲೋಕಸಭೆ ಚುನಾವಣೆ ಜೊತೆಗೇ ನಡೆಸಲು ಹಿಂದೇಟು ಹಾಕಿದೆ.
ಭದ್ರತೆಯ ಕಾರಣದಿಂದಾಗಿ ಅನಂತ್ ನಾಗರ್ ಲೋಕಸಭಾ ಕ್ಷೇತ್ರದಲ್ಲಿ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದೆ ಆಯೋಗ ಹೇಳಿಕೆ ನೀಡಿದೆ.
Advertisement