ಮೇಲ್ವರ್ಗದ ಬಡವರಿಗೆ ಶೇ. 10 ಮೀಸಲಾತಿ ಪ್ರಶ್ನಿಸಿರುವ ಅರ್ಜಿ ವಿಚಾರಣೆ ಮಾ.28 ಕ್ಕೆ: ಸುಪ್ರೀಂ ಕೋರ್ಟ್

ಮೇಲ್ವರ್ಗದ ಬಡವರಿಗೆ ಶೇ.10 ರಷ್ಟು ಮೀಸಲಾತಿಯ ವಿಷಯವನ್ನು ಈ ಹಂತದಲ್ಲಿ ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ ಮಾಡುವುದಕ್ಕೆ ಒಲವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಮೇಲ್ವರ್ಗದ ಬಡವರಿಗೆ ಶೇ, 10 ರಷ್ಟು ಮೀಸಲಾತಿ ಪ್ರಶ್ನಿಸಿರುವ ಅರ್ಜಿ ವಿಚಾರಣೆ ಮಾ.28 ಕ್ಕೆ: ಸುಪ್ರೀಂ ಕೋರ್ಟ್
ಮೇಲ್ವರ್ಗದ ಬಡವರಿಗೆ ಶೇ, 10 ರಷ್ಟು ಮೀಸಲಾತಿ ಪ್ರಶ್ನಿಸಿರುವ ಅರ್ಜಿ ವಿಚಾರಣೆ ಮಾ.28 ಕ್ಕೆ: ಸುಪ್ರೀಂ ಕೋರ್ಟ್
Updated on
ನವದೆಹಲಿ: ಮೇಲ್ವರ್ಗದ ಬಡವರಿಗೆ ಶೇ.10 ರಷ್ಟು ಮೀಸಲಾತಿಯ ವಿಷಯವನ್ನು ಈ ಹಂತದಲ್ಲಿ ಸಾಂವಿಧಾನಿಕ ಪೀಠಕ್ಕೆ ವರ್ಗಾವಣೆ ಮಾಡುವುದಕ್ಕೆ ಒಲವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ. 
ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ನೇತೃತ್ವದ ಪೀಠ ಈ ಮಾ.11 ರಂದು ಈ ವಿಷಯದ ಬಗ್ಗೆ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಾಣೆ ನಡೆಸಿದ್ದು, ಸಾಂವಿಧಾನಿಕ ಪೀಠಕ್ಕೆ ಈ ವಿಚಾರವನ್ನು ವರ್ಗಾವಣೆ ಮಾಡಲು ಈ ಹಂತದಲ್ಲಿ ಆದೇಶ ಹೊರಡಿಸುವುದಕ್ಕೆ ತನಗೆ ಒಲವಿಲ್ಲ ಎಂದಿದೆ. 
ಮಾ.28 ಕ್ಕೆ ಅರ್ಜಿಯ ವಿಚಾರಣೆ ಮುಂದೂಡಿರುವ ನ್ಯಾಯಾಲಯ, ಶೇ.10 ರಷ್ಟು ಮೀಸಲಾತಿ ವಿಚಾರವನ್ನು ಸಾಂವಿಧಾನ ಪೀಠಕ್ಕೆ ವರ್ಗಾಯಿಸುವ ಅಗತ್ಯವನ್ನು ಪರಿಗಣಿಸುವುದಾಗಿ ಹೇಳಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com