ಇಥಿಯೋಪಿಯಾ ವಿಮಾನ ಪತನ: ಮೃತರ ಕುಟುಂಬಗಳಿಗೆ ನೆರವು ನೀಡುವಂತೆ ಹೈಕಮೀಷನರ್ ಗೆ ಸುಷ್ಮಾ ಸೂಚನೆ

ಇಥಿಯೋಪಿಯನ್ ಏರ್ ಲೈನ್ಸ್ ವಿಮಾನ ದುರಂತದಲ್ಲಿ ಮೃತಪಟ್ಟ ಭಾರತೀಯರ ಕುಟುಂಬ ಸದಸ್ಯರಿಗೆ ಅಗತ್ಯ ನೆರವು ನೀಡುವಂತೆ ಅಲ್ಲಿನ ಭಾರತೀಯ ಹೈಕಮೀಷನರ್ ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸೂಚಿಸಿದ್ದಾರೆ.
ಸುಷ್ಮಾ ಸ್ವರಾಜ್
ಸುಷ್ಮಾ ಸ್ವರಾಜ್
Updated on

ನವದೆಹಲಿ: ಇಥಿಯೋಪಿಯನ್ ಏರ್ ಲೈನ್ಸ್ ವಿಮಾನ ದುರಂತದಲ್ಲಿ ಮೃತಪಟ್ಟ ಭಾರತೀಯರ ಕುಟುಂಬ ಸದಸ್ಯರಿಗೆ  ಅಗತ್ಯ ನೆರವು ನೀಡುವಂತೆ ಅಲ್ಲಿನ ಭಾರತೀಯ  ಹೈಕಮೀಷನರ್ ಗೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಸೂಚಿಸಿದ್ದಾರೆ.

ಈ ದುರ್ಘಟನೆ ಬಗ್ಗೆ ಟ್ವೀಟರ್ ನಲ್ಲಿ ಸಂತಾಪ ವ್ಯಕ್ತಪಡಿಸಿರುವ ಸುಷ್ಮಾ ಸ್ವರಾಜ್, ಇಥಿಯೋಪಿಯನ್ ಏರ್ ಲೈನ್ಸ್  ಇಟಿ 302 ವಿಮಾನ ಅಪಘಾತ ದುರದೃಷ್ಟಕರ ಘಟನೆ ಸುದ್ದಿ ಕೇಳಿ ನೋವಾಗಿದೆ. ಈ ದುರ್ಘಟನೆಯಲ್ಲಿ ನಾಲ್ವರು ಭಾರತೀಯರನ್ನು ಕಳೆದುಕೊಂಡಿದ್ದೇವೆ. ಮೃತರ ಕುಟುಂಬ ಸದಸ್ಯರಿಗೆ ಅಗತ್ಯ ನೆರವು ನೀಡುವಂತೆ ಅಲ್ಲಿನ ಹೈಕಮೀಷನರ್ ಗೆ ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com