ಸಂಜೋತ ಎಕ್ಸ್ ಪ್ರೆಸ್ ಸ್ಫೋಟ ಪ್ರಕರಣಕ್ಕೆ ಮಹತ್ವದ ತಿರುವು: ಮಾ.14 ಕ್ಕೆ ವಿಚಾರಣೆ ಮುಂದೂಡಿಕೆ

ಸಂಜೋತಾ ಎಕ್ಸ್ ಪ್ರೆಸ್ ಸ್ಫೋಟ ಪ್ರಕರಣದ ತೀರ್ಪು ಪ್ರಕಟವಾಗಬೇಕಿದ್ದ ದಿನವೇ ಮಹತ್ವದ ತಿರುವು ದೊರೆತಿದ್ದು, ಹರ್ಯಾಣದ ಪಂಚಕುಲ ಕೋರ್ತ್ ವಿಚಾರಣೆಯನ್ನು ಮಾ.14 ಕ್ಕೆ ಮುಂದೂಡಿದೆ.
ಸಂಜೋತ ಎಕ್ಸ್ ಪ್ರೆಸ್ ಸ್ಫೋಟ ಪ್ರಕರಣಕ್ಕೆ ಮಹತ್ವದ ತಿರುವು: ಮಾ.14 ಕ್ಕೆ ವಿಚಾರಣೆ ಮುಂದೂಡಿಕೆ
ಸಂಜೋತ ಎಕ್ಸ್ ಪ್ರೆಸ್ ಸ್ಫೋಟ ಪ್ರಕರಣಕ್ಕೆ ಮಹತ್ವದ ತಿರುವು: ಮಾ.14 ಕ್ಕೆ ವಿಚಾರಣೆ ಮುಂದೂಡಿಕೆ
Updated on
ಹರ್ಯಾಣ: ಸಂಜೋತಾ ಎಕ್ಸ್ ಪ್ರೆಸ್ ಸ್ಫೋಟ ಪ್ರಕರಣದ ತೀರ್ಪು ಪ್ರಕಟವಾಗಬೇಕಿದ್ದ ದಿನವೇ ಮಹತ್ವದ ತಿರುವು ದೊರೆತಿದ್ದು, ಹರ್ಯಾಣದ ಪಂಚಕುಲ ಕೋರ್ತ್ ವಿಚಾರಣೆಯನ್ನು ಮಾ.14 ಕ್ಕೆ ಮುಂದೂಡಿದೆ. 
ಪಾಕಿಸ್ತಾನದ ಮಹಿಳೆಯೊಬ್ಬರು ಈ ಪ್ರಕರಣದಲ್ಲಿ ಹೊಸ ಸಾಕ್ಷ್ಯ ಒದಗಿಸಲು ಮುಂದೆ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಬಗ್ಗೆ ಮಾ.14 ರಂದು ಮಹಿಳೆ ನೀಡಲಿರುವ ಸಾಕ್ಷ್ಯಾಧಾರವನ್ನು ಪರಿಶೀಲಿಸಿ ವಿಚಾರಣೆ ನಡೆಸುವುದಾಗಿ ಕೋರ್ಟ್ ಹೇಳಿದೆ. 
12 ವರ್ಷಗಳ ಹಿಂದೆ ಅಂದರೆ 2007 ರ ಫೆ.18 ರಂದು ಹರ್ಯಾಣದ ಪಾನಿಪತ್ ನಲ್ಲಿ ಸಂಜೋತಾ ಎಕ್ಸ್ ಪ್ರೆಸ್ ನಲ್ಲಿ  ಬಾಂಬ್ ಸ್ಫೋಟಗೊಂಡು 68 ಜನರು ಸಾವನ್ನಪ್ಪಿದ್ದರು. ಬೇರೆ ಬೋಗಿಗಳಲ್ಲೂ ಎರಡು ಜೀವಂತ ಸೂಟ್​ಕೇಸ್ ಬಾಂಬ್​ಗಳು ಪತ್ತೆಯಾಗಿದ್ದವು. 2016 ರ ಡಿಸೆಂಬರ್ ನಲ್ಲಿ ಪ್ರಕರಣದ ಪ್ರಮುಖ ಆರೋಪಿ ಅಸೀಮಾನಂದ ಜಾಮೀನು ಪಡೆದಿದ್ದರು. ಇತರ ಕೆಲವು ಆರೋಪಿಗಳು ಬಂಧನದಲ್ಲೇ ಇದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com