ನವದೆಹಲಿ: ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ, ಜೈಷ್ - ಇ-ಮೊಹಮ್ಮದ್ ಉಗ್ರ ಸಂಘಟನೆ ಮುಖ್ಯಸ್ಥ ಮಸೂದ್ ಅಝರ್ ಜೀ ಎಂದು ಹೇಳಿರುವುದು ವಿವಾದಕ್ಕೆ ಕಾರಣವಾಗಿರುವಂತೆ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಲು ಬಿಜೆಪಿ ಕೈಗೆ ಹೊಸ ಆಸ್ತ್ರ ಸಿಕ್ಕಂತಾಗಿದೆ.
ರಾಹುಲ್ ಗಾಂಧಿ ಅವರ ಹೇಳಿಕೆ ಟಿವಿ ಚಾನೆಲ್ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ಟಿವಿ ಚಾನೆಲ್ ವೊಂದಕ್ಕೆ ಹೇಳಿಕೆ ನೀಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಇದನ್ನು ಹೇಳಲು ನಾಚಿಕೆಯಾಗಲಿಲ್ಲವೇ ಎಂದಿದ್ದಾರೆ.
Advertisement