ಕಳೆದ 5 ವರ್ಷದ ಅವಧಿಯಲ್ಲಿ ಬಿಜೆಪಿ ಸರ್ಕಾರ ಸುಳ್ಳು ಭರವಸೆ ನೀಡಿ ಜನರ ನಂಬಿಕೆ ಮತ್ತು ಆತ್ಮವಿಶ್ವಾಸಕ್ಕೆ ದ್ರೋಹ ಮಾಡಿದೆ. ಎಲ್ಲ ವಿಭಾಗಗಳಲ್ಲಿಯೂ ಈ ಸರ್ಕಾರ ವಿಫಲವಾಗಿದೆ. ಜಿಎಸ್ಟಿ, ನೋಟು ಅಮಾನ್ಯೀಕರಣದಂತ ತಪ್ಪು ನಿರ್ಧಾರ ಭಾರತದ ಆರ್ಥಿಕತೆ ಮತ್ತು ವ್ಯಾಪಾರ ಹಾಗೂ ಕೈಗಾರಿಕೆ ಬೆಳವಣಿಗೆಯನ್ನು ಕುಂಠಿತಗೊಳಿಸಿದೆ. ಲಕ್ಷಾಂತರ ಕೈಗಾರಿಕೆಗಳು ಮುಚ್ಚಿವೆ. ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ವರ್ಗದ ಉದ್ಯಮಗಳು ಶೋಚನೀಯ ಸ್ಥಿತಿಯಲ್ಲಿದ್ದು, ಅಲ್ಲಿನ ಲಕ್ಷಾಂತರ ಮಂದಿ ಉದ್ಯೋಗ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ ಎಂದು ಆರೋಪಿಸಿದೆ.