ಬಾಲಕೋಟ್ ನಲ್ಲಿ ಭಾರತೀಯ ವಾಯುದಾಳಿಗೆ ಪಾಕಿಸ್ತಾನದ ಪ್ರತ್ಯುತ್ತರದ ಬಗ್ಗೆ ಪ್ರಶ್ನಿಸಿದಾಗ ಸುಷ್ಮಾ ಸ್ವರಾಜ್, ಜೈಶ್ ಎ ಮೊಹಮ್ಮದ್ ಭಯೋತ್ಪಾದಕ ಸಂಘಟನೆಯನ್ನೇ ಗುರಿಯಾಗಿಟ್ಟುಕೊಂಡು ಭಾರತ ವಾಯುದಾಳಿ ಮಾಡಿದೆ. ಆದರೆ ಅದಕ್ಕೆ ಪ್ರತಿಯಾಗಿ ಪಾಕಿಸ್ತಾನ ಮಿಲಿಟರಿ ಜೈಶ್ ಎ ಮೊಹಮ್ಮದ್ ಪರವಾಗಿ ನಮ್ಮ ಮೇಲೇಕೆ ದಾಳಿ ಮಾಡಬೇಕು ಎಂದು ಪ್ರಶ್ನಿಸಿದರು.