ಅಮರನಾಥ ಯಾತ್ರೆಗೆ ಮುನ್ನ ಸಕಲ ಭದ್ರತೆಯೊಂದಿಗೆ ವಿಧಾನಸಭೆ ಚುನಾವಣೆ ನಡೆಸಬೇಕು ಎಂಬ ಬಗ್ಗೆ ಸಾಮಾನ್ಯ ಅಭಿಪ್ರಾಯ ವ್ಯಕ್ತವಾಗಿದೆ. ರಾಜ್ಯ ವಿಧಾನಸಭೆ ಚುನಾವಣೆ ನಡೆಸುವ ಬಗ್ಗೆ ಮರು ಚಿಂತನೆ ನಡೆಯುತ್ತಿದೆ. ಚುನಾವಣಾ ಆಯೋಗದ ವೀಕ್ಷಕರು ಇಂದು ಶ್ರೀನಗರಕ್ಕೆ ಬರುತ್ತಾರೆ. ತಂಡ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಮುಖ್ಯ ಕಾರ್ಯದರ್ಶಿಗಳು ಮತ್ತು ಪೊಲೀಸ್ ಮಹಾ ನಿರ್ದೇಶಕರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ.