ಈಶಾನ್ಯ ರಾಜ್ಯಗಳಲ್ಲಿನ ಮೂಲಸೌಕರ್ಯ ನಾಶಮಾಡಲು ಮ್ಯಾನ್ಮಾರ್ ನ ಅರಕಾನ್ ಆರ್ಮಿಗೆ ಸೇರಿದ ಬಂಡುಕೋರರ ಯತ್ನಿಸುತ್ತಿದ್ದು, ಅವರ ವಿರುದ್ಧ ಉಭಯ ದೇಶಗಳ ಸೇನೆ ಜಂಟಿ ಕಾರ್ಯಾಚರಣೆ ನಡೆಸಿತ್ತು. ಕೋಲ್ಕತ್ತಾ ಬಂದರಿನಿಂದ ಮ್ಯಾನ್ಮಾರ್ನ ಸಿಟ್ವೆ ಬಂದರಿಗೆ ಸಂಪರ್ಕ ಕಲ್ಪಿಸುವ ಮಹತ್ವದ ಕಲಾಡನ್ ಬಹು ಉದ್ದೇಶಿತ ಸಾರಿಗೆ ಯೋಜನೆಯಲ್ಲಿ ಕೆಲಸಮಾಡುತ್ತಿರುವ ಭಾರತೀಯರಿಗೆ ಬಂಡುಕೋರರು ಬೆದರಿಕೆ ಹಾಕಿದ್ದು, ಹಣ ನೀಡುವಂತೆ ಪೀಡಿಸಿದ್ದರು. ಬಂಡುಕೋರರು ಸಿಡಿಸಿದ ಸುಧಾರಿತ ಸ್ಪೋಟಕಕ್ಕೆ ಮ್ಯಾನ್ಮಾರ್ ನ ಸೈನಿಕರೊಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಸೇನೆಯ ಹಿರಿಯ ಅಧಿಕಾರಿ ತಿಳಿಸಿದರು.