ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಾಲುಮರದ ತಿಮ್ಮಕ್ಕ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು. ಈ ವೇಳೆ ತಿಮ್ಮಕ್ಕ ಅವರು ರಾಷ್ಟ್ರಪತಿ ಅವರ ಹಣೆಯನ್ನು ಮುಟ್ಟಿ ಆಶೀರ್ವದಿಸಿದರು. ರಾಷ್ಟ್ರಪತಿಗಳು ಸಹ ದೀರ್ಘಾಯುಶಿ ತಿಮ್ಮಕ್ಕ ಅವರನ್ನು ಆಶೀರ್ವಾದವನ್ನು ಭಕ್ತಿ ಪೂರ್ವಕವಾಗಿ ಸ್ವೀಕರಿಸಿದ ಅಪೂರ್ವ ಘಟನೆ ನಡೆಯಿತು.