ಅರಾಕನ್ ಆರ್ಮಿ ಉತ್ತಮ ತರಬೇತಿ ಪಡೆದ ಉಗ್ರರ ಗುಂಪಾಗಿದ್ದು, ಸುಧಾರಿತ ಸ್ಫೋಟಕಗಳನ್ನು ಬಳಸಿ ಕೃತ್ಯ ನಡೆಸುತಿತ್ತು. ಈ ಉಗ್ರ ಸಂಘಟನೆ ಮ್ಯಾನ್ಮಾರ್, ಭಾರತದ ತಲೆನೋವಿಗೆ ಕಾರಣವಾಗಿತ್ತು. ಮ್ಯಾನ್ಮಾರ್ ಸರ್ಕಾರ ನೀಡಿದ್ದ ಮಾಹಿತಿ ಆಧಾರಿಸಿ ಭಾರತ ಉಗ್ರರನ್ನು ಹೊಡೆದುರಳಿಸಿದೆ. ಕಾರ್ಯಾಚರಣೆಯಲ್ಲಿ 12ಕ್ಕೂ ಹೆಚ್ಚು ಉಗ್ರರ ಅಡಗುತಾಣಗಳು ನಾಶವಾಗಿರುವುದು ಖಚಿತವಾಗಿದೆ. ಭಾರತ ಸೇನೆಯ ವಿಶೇಷ ದಳಗಳು, ಅಸ್ಸಾಂ ರೈಫಲ್ಸ್ ಹಾಗೂ ಮ್ಯಾನ್ಮಾರ್ ಸೇನೆಯನ್ನು ಬಳಕೆ ಮಾಡಲಾಗಿದೆ. ಕಾರ್ಯಾಚರಣೆಗೆ ಹೆಲಿಕಾಪ್ಟರ್, ಡ್ರೋನ್ ಮತ್ತು ಕಣ್ಗಾವಲು ಸಾಧನಗಳನ್ನು ಕೂಡ ಬಳಕೆ ಮಾಡಲಾಗಿದೆ.