ಪರಿಕ್ಕರ್​ ಆರೋಗ್ಯ ಗಂಭೀರ; ಸರ್ಕಾರ ರಚನೆಗೆ ಅವಕಾಶ ಕೊಡಿ ಎಂದ ಕಾಂಗ್ರೆಸ್, ರಾಜ್ಯಪಾಲರಿಗೆ ಪತ್ರ

ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಗೋವಾದಲ್ಲಿ ಸರ್ಕಾರ ರಚನೆಗೆ ತಮಗೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ಗೋವಾ ರಾಜ್ಯಪಾಲರಿಗೆ ಪತ್ರ ಬರೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ನವದೆಹಲಿ: ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಗೋವಾದಲ್ಲಿ ಸರ್ಕಾರ ರಚನೆಗೆ ತಮಗೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ಗೋವಾ ರಾಜ್ಯಪಾಲರಿಗೆ ಪತ್ರ ಬರೆದಿದೆ.
ಕಾಂಗ್ರೆಸ್ ಗೋವಾದಲ್ಲಿ ಸರ್ಕಾರ ರಚಿಸಲು ಅವಕಾಶ ನೀಡಿ ಎಂದು ರಾಜ್ಯಪಾಲೆ ಮೃದುಲಾ ಸಿನ್ಹಾ ಅವರಿಗೆ ಪತ್ರ ಬರೆದಿದೆ. ಪ್ರತಿಪಕ್ಷದ ನಾಯಕ ಚಂದ್ರಕಾಂತ್ ಕಾವ್ಲೇಕರ್ ಅವರು ಬರೆದಿರುವ ಪತ್ರದಲ್ಲಿ, 'ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರಕ್ಕೆ ಬಹುಮತವಿಲ್ಲ. ಬಿಜೆಪಿ ಸರ್ಕಾರವನ್ನು ವಜಾಗೊಳಿಸಿ ಹಾಗೂ ರಾಜ್ಯ ವಿಧಾನ ಸಭೆಯ ಅತಿ ದೊಡ್ಡ ಕಾಂಗ್ರೆಸ್ ಪಕ್ಷವನ್ನು ಸರ್ಕಾರ ರಚಿಸಲು ಅವಕಾಶ ನೀಡಿ' ಎಂದು ಬರೆದಿದ್ದಾರೆ.
'ಬಿಜೆಪಿ ಶಾಸಕ ಫ್ರಾನ್ಸಿಸ್ ಡಿ ಸೋಜಾ ನಿಧನರಾದ ನಂತರ ಪರಿಕ್ಕರ್ ನಾಯಕತ್ವದಲ್ಲಿ ಬಿಜೆಪಿ ಸರ್ಕಾರ ಜನರ ನಂಬಿಕೆಯನ್ನು ಕಳೆದುಕೊಂಡಿದ್ದಲ್ಲದೆ, ವಿಧಾನ ಸಭೆಯಲ್ಲೂ ಬಹುಮತ ಕಳೆದುಕೊಂಡಿದೆ. ಜೊತೆಗೆ ಬಿಜೆಪಿ ಸ್ಥಾನದ ಸಂಖ್ಯೆಯು ಕಡಿಮೆಯಾಗುತ್ತಿದೆ. ಹೀಗಾಗಿ ಬಿಜೆಪಿ ಪಕ್ಷಕ್ಕೆ ಅಧಿಕಾರ ಮುಂದುವರಿಸಲು ಅವಕಾಶ ಕೊಡಬಾರದು. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವನ್ನು ವಜಾ ಮಾಡಿ' ಎಂದು ಕಾವ್ಲೇಕರ್ ಬರೆದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com