ದಾಂತೇವಾಡ: ಛತ್ತೀಸ್ ಗಢದ ದಾಂತೇವಾಡದಲ್ಲಿ ಮತ್ತೆ ಮಾವೋವಾದಿಗಳು ಅಟ್ಟಹಾಸ ಮೆರೆದಿದ್ದು, 5 ಸಿಆರ್ ಪಿಎಫ್ ಯೋಧರಿಗೆ ಗಾಯವಾಗಿದ್ದರೆ ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮನರಾಗಿದ್ದಾರೆ. .ಸುಧಾರಿತ ಸ್ಫೋಟಕ ಸಾಧನ ಬಳಸಿ ಮಾವೋವಾದಿಗಳು ಈ ದಾಳಿ ನಡೆಸಿದ್ದು, ಸಿಆರ್ ಪಿಎಫ್ ನ ಕಮಲ್ ಪೋಸ್ಟ್ ನಲ್ಲಿ ಈ ಘಟನೆ ನಡೆದಿದೆ..ಐಇಡಿ ಸ್ಫೋಟಿಸುವುದಷ್ಟೇ ಅಲ್ಲದೇ 231 ಬೆಟಾಲಿಯನ್ ನ ಸಿಬ್ಬಂದಿಗಳ ಮೇಲೆ ಮಾವೋವಾದಿಗಳು ಗುಂಡಿನ ದಾಳಿಯನ್ನೂ ನಡೆಸಿದ್ದು, ಈ ಘಟನೆಯಲ್ಲಿ ಓರ್ವ ಮುಖ್ಯಪೇದೆ ಮೃತಪಟ್ಟಿದ್ದಾರೆ. .ಮಾವೋವಾದಿಗಳ ಗುಂಡಿನ ದಾಳಿಗೆ ಸಿಆರ್ ಪಿಎಫ್ ಪ್ರತಿದಾಳಿ ನಡೆಸಿದ್ದು, ಗುಂಡಿನ ಚಕಮಕಿ ಮುಂದುವರೆದಿದೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ದಾಂತೇವಾಡ: ಛತ್ತೀಸ್ ಗಢದ ದಾಂತೇವಾಡದಲ್ಲಿ ಮತ್ತೆ ಮಾವೋವಾದಿಗಳು ಅಟ್ಟಹಾಸ ಮೆರೆದಿದ್ದು, 5 ಸಿಆರ್ ಪಿಎಫ್ ಯೋಧರಿಗೆ ಗಾಯವಾಗಿದ್ದರೆ ಓರ್ವ ಸಿಆರ್ ಪಿಎಫ್ ಯೋಧ ಹುತಾತ್ಮನರಾಗಿದ್ದಾರೆ. .ಸುಧಾರಿತ ಸ್ಫೋಟಕ ಸಾಧನ ಬಳಸಿ ಮಾವೋವಾದಿಗಳು ಈ ದಾಳಿ ನಡೆಸಿದ್ದು, ಸಿಆರ್ ಪಿಎಫ್ ನ ಕಮಲ್ ಪೋಸ್ಟ್ ನಲ್ಲಿ ಈ ಘಟನೆ ನಡೆದಿದೆ..ಐಇಡಿ ಸ್ಫೋಟಿಸುವುದಷ್ಟೇ ಅಲ್ಲದೇ 231 ಬೆಟಾಲಿಯನ್ ನ ಸಿಬ್ಬಂದಿಗಳ ಮೇಲೆ ಮಾವೋವಾದಿಗಳು ಗುಂಡಿನ ದಾಳಿಯನ್ನೂ ನಡೆಸಿದ್ದು, ಈ ಘಟನೆಯಲ್ಲಿ ಓರ್ವ ಮುಖ್ಯಪೇದೆ ಮೃತಪಟ್ಟಿದ್ದಾರೆ. .ಮಾವೋವಾದಿಗಳ ಗುಂಡಿನ ದಾಳಿಗೆ ಸಿಆರ್ ಪಿಎಫ್ ಪ್ರತಿದಾಳಿ ನಡೆಸಿದ್ದು, ಗುಂಡಿನ ಚಕಮಕಿ ಮುಂದುವರೆದಿದೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ