ಮತ್ತೆ ಕದನ ವಿರಾಮ ಉಲ್ಲಂಘಿಸಿದ ಪಾಕ್, ತೀವ್ರ ಶೆಲ್ಲಿಂಗ್; ಯೋಧ ಹುತಾತ್ಮ, ಹಲವರಿಗೆ ಗಾಯ

ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಗಡಿಯಲ್ಲಿ ಪಾಕಿಸ್ತಾನ ಸೇನೆಯ ಕದನ ವಿರಾಮ ಉಲ್ಲಂಘನೆ ಹೆಚ್ಚಾಗುತ್ತಿದ್ದು, ಇಂದೂ ಕೂಡ ಪಾಕಿಸ್ತಾನ ಸೇನೆ ತೀವ್ರ ಶೆಲ್ಲಿಂಗ್ ಮತ್ತು ಗುಂಡಿನ ದಾಳಿ ನಡೆಸಿದ್ದು ಈ ವೇಳೆ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಶ್ರೀನಗರ: ಪುಲ್ವಾಮ ಉಗ್ರ ದಾಳಿ ಬೆನ್ನಲ್ಲೇ ಗಡಿಯಲ್ಲಿ ಪಾಕಿಸ್ತಾನ ಸೇನೆಯ ಕದನ ವಿರಾಮ ಉಲ್ಲಂಘನೆ ಹೆಚ್ಚಾಗುತ್ತಿದ್ದು, ಇಂದೂ ಕೂಡ ಪಾಕಿಸ್ತಾನ ಸೇನೆ ತೀವ್ರ ಶೆಲ್ಲಿಂಗ್ ಮತ್ತು ಗುಂಡಿನ ದಾಳಿ ನಡೆಸಿದ್ದು ಈ ವೇಳೆ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ.
ಕಾಶ್ಮೀರದ ಸುಂದರ್ ಬನಿ ಸೆಕ್ಟರ್ ನ ಕೆರಿ ಬಟ್ಟಲ್ ಪ್ರಾಂತ್ಯದಲ್ಲಿ ಈ ಘಟನೆ ನಡೆದಿದ್ದು, ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಸೇನೆ ತೀವ್ರ ಗುಂಡಿನ ಚಕಮಕಿ ಮತ್ತು ಶೆಲ್ ದಾಳಿ ನಡೆಸುತ್ತಿದೆ. ಘಟನೆಯಲ್ಲಿ ಓರ್ವ ಯೋಧ ಹುತಾತ್ಮನಾಗಿದ್ದು, ಮೂವರು ಗಾಯಗೊಂಡಿದ್ದಾರೆ.
ಪಾಕಿಸ್ತಾನದ ಅಪ್ರಚೋದಿತ ದಾಳಿಗೆ ಭಾರತೀಯ ಸೇನೆ ಕೂಡ ತಕ್ಕ ಉತ್ತರ ನೀಡುತ್ತಿದ್ದು, ತೀವ್ರ ಗುಂಡಿನ ದಾಳಿ ನಡೆಸುತ್ತಿದೆ. ಹುತಾತ್ಮ ಯೋಧರ ಕುರಿತು ಇನ್ನಷ್ಟೇ ಮಾಹಿತಿ ಲಭ್ಯವಾಗಬೇಕಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com