ಮುಂದಿನ ದಲೈಲಾಮ ಯಾರಾಗಲಿದ್ದಾರೆ ಎಂಬ ಪ್ರಶ್ನೆಗೆ ನನಗಿಂತಲೂ ಚೀನಾ ಸರ್ಕಾರಕ್ಕೇ ಹೆಚ್ಚು ಚಿಂತೆ ಕಾಡುತ್ತಿದೆ. ಈಗಾಗಲೇ ಚೀನಾ ಸರ್ಕಾರ ಮುಂದಿನ ದಲೈಲಾಮ ಆಯ್ಕೆ ವಿಚಾರದಲ್ಲಿ ತನಗೂ ಹಕ್ಕಿದೆ ಎಂದು ವಾದಿಸುತ್ತಿದೆ. ಆದರೆ ಟಿಬಿಟಿಯನ್ನರು ಹಕ್ಕಿನ ಆಧಾರದ ಮೇಲೆ ದಲೈಲಾಮನನ್ನು ಆಯ್ಕೆ ಮಾಡುವುದಿಲ್ಲ, ಅದು ಸಂಪ್ರದಾಯದ ಮೇಲೆ ಆಧಾರಿತವಾಗಿರುತ್ತದೆ. ದಲೈಲಾಮ ಸಾವಿನ ಬಳಿಕ ಆತನ ಆತ್ಮ ಮುಂದಿನ ಅವತಾರಕ್ಕಾಗಿ ಪುಟ್ಟಬಾಲಕನ ಸೇರುತ್ತದೆ. ಈ ಬಗ್ಗೆ ಬೌದ್ಧ ಧಾರ್ಮಿಕ ಗುರುಗಳಿಗಷ್ಟೇ ಅರಿವಾಗುತ್ತದೆ ಎಂದು ದಲೈಲಾಮ ಹೇಳಿದ್ದಾರೆ.