ಚೌಕೀದಾರ್ ಪದ ಈಗ ದೇಶಭಕ್ತಿ, ಪ್ರಾಮಾಣಿಕತೆಗೆ ಸಮಾನಾರ್ಥಕ: ಪ್ರಧಾನಿ ಮೋದಿ

ಚೌಕೀದಾರ್ ಚೋರ್ ಹೈ (ಕಾವಲುಗಾರ ಕಳ್ಳ) ಎಂಬ ತಮ್ಮ ಬಗೆಗಿನ ರಾಹುಲ್ ಗಾಂಧಿ ಹೇಳಿಕೆಗೆ ಪ್ರಧಾನಿ ಮೋದಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಎಐಸಿಸಿ ಅಧ್ಯಕ್ಷರು ಕಾವಲುಗಾರರಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ
ಚೌಕೀದಾರ್ ಪದ ಈಗ ದೇಶಭಕ್ತಿ, ಪ್ರಾಮಾಣಿಕತೆಗೆ ಸಮಾನಾರ್ಥಕ: ಪ್ರಧಾನಿ ಮೋದಿ
ಚೌಕೀದಾರ್ ಪದ ಈಗ ದೇಶಭಕ್ತಿ, ಪ್ರಾಮಾಣಿಕತೆಗೆ ಸಮಾನಾರ್ಥಕ: ಪ್ರಧಾನಿ ಮೋದಿ
Updated on
ನವದೆಹಲಿ: ಚೌಕೀದಾರ್ ಚೋರ್ ಹೈ (ಕಾವಲುಗಾರ ಕಳ್ಳ) ಎಂಬ ತಮ್ಮ ಬಗೆಗಿನ ರಾಹುಲ್ ಗಾಂಧಿ ಹೇಳಿಕೆಗೆ ಪ್ರಧಾನಿ ಮೋದಿ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದು, ಎಐಸಿಸಿ ಅಧ್ಯಕ್ಷರು ಕಾವಲುಗಾರರಾಗಿ ಕಾರ್ಯನಿರ್ವಹಿಸುತ್ತಿರುವವರಿಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿದ್ದಾರೆ. 
ದೇಶಾದ್ಯಂತ ವಿವಿಧ ಭಾಗಗಳಲ್ಲಿಕಾವಲುಗಾರರಾಗಿ ಕಾರ್ಯನಿರ್ವಹಿಸುತ್ತಿರುವವರೊಂದಿಗೆ ಮಾ.20 ರಂದು ಸಂವಾದ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ, "ಚೌಕೀದಾರ ಎಂಬ ಪದ ಈಗ ರಾಷ್ಟ್ರಭಕ್ತಿ ಹಾಗೂ ಪ್ರಾಮಾಣಿಕತೆಗೆ ಸಮಾನಾರ್ಥಕವಾಗಿದೆ. ನನ್ನನ್ನು ನೇರವಾಗಿ ಹೆಸರಿಸಿ ಆರೋಪ ಮಾಡುವುದಕ್ಕೆ ಎದುರಾಳಿಗಳಿಗೆ ಧೈರ್ಯವಿಲ್ಲ. ಆದ್ದರಿಂದ ಕಾವಲುಗಾರರನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿ ತಮ್ಮನ್ನು ದೇಶದ ಕಾವಲುಗಾರ ಎಂದು ಹೇಳಿಕೊಂಡಿದ್ದರು. ಇದನ್ನೇ ಟೀಕೆಗೆ ಬಳಸಿಕೊಂಡಿದ್ದ ರಾಹುಲ್ ಗಾಂಧಿ ರಾಫೆಲ್ ಒಪ್ಪಂದದಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾಗ ದೇಶದ ಕಾವಲುಗಾರ ಕಳ್ಳ ಎಂದು ವಾಗ್ದಾಳಿ ನಡೆಸಿದ್ದರು. ತಮ್ಮ ವಿನೂತನ ರೀತಿಯ ಚುನಾವಣಾ ಪ್ರಚಾರಗಳಿಗೆ ಖ್ಯಾತಿ ಪಡೆದಿರುವ ಮೋದಿ, ಇತ್ತೀಚೆಗಷ್ಟೇ ಸಾಮಾಜಿಕ ಜಾಲತಾಣದಲ್ಲಿ ಮೇ ಭೀ ಚೌಕೀದಾರ್ ಎಂಬ ಅಭಿಯಾನವನ್ನು ಪ್ರಾರಂಭಿಸಿದ್ದರು. 
ಸುಮಾರು 25 ಲಕ್ಷ ಕಾವಲುಗಾರರೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಹೆಸರನ್ನು ಉಲ್ಲೇಖಿಸದೆ ರಾಹುಲ್ ಗಾಂಧಿ ವಿರುದ್ಧ ಟೀಕಾಪ್ರಹಾರ ನಡೆಸಿರುವ ಪ್ರಧಾನಿ ಮೋದಿ ಕಾಯಕದಲ್ಲೇ ನಂಬಿಕೆ ಇಟ್ಟಿರುವವರ ವಿರುದ್ಧ ವಂಶರಾಜಕಾರಣ ಮಾಡುವವರು ದ್ವೇಷ ಹರಡುತ್ತಾರೆ. ಮತ್ತೊಬ್ಬರು ಪ್ರಧಾನಿಯಾದರೆ ಅವರಿಗೆ ಅವಮಾನ ಮಾಡುತ್ತಾರೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com