ಲಾಲ್ ಬಹದ್ದೂರ್ ಶಾಸ್ತ್ರಿ ಪ್ರತಿಮೆಗೆ ಪ್ರಿಯಾಂಕಾ ಮಾಲಾರ್ಪಣೆ: ಬಿಜೆಪಿ ಕಾರ್ಯಕರ್ತರಿಂದ ಶುದ್ದೀಕರಣ ಕಾರ್ಯ

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಬಿಜೆಪಿ ಕಾರ್ಯಕರ್ತರು, ಗಂಗಾಜಲ ಸುರಿದು ...
ಗಂಗಾಜಲದಿಂದ ಪ್ರತಿಮೆ ಶುದ್ದೀಕರಣ
ಗಂಗಾಜಲದಿಂದ ಪ್ರತಿಮೆ ಶುದ್ದೀಕರಣ
Updated on
ವಾರಣಾಸಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಬಿಜೆಪಿ ಕಾರ್ಯಕರ್ತರು, ಗಂಗಾಜಲ ಸುರಿದು ಶುದ್ದೀಕರಣ ಮಾಡಿದ್ದಾರೆ.
ಗಂಗಾಯಾತ್ರೆ ಅಂಗವಾಗಿ ಪ್ರಿಯಾಂಕಾ ಗಾಂಧಿ ಅವರು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಪ್ರತಿಮೆಗೆ  ಮಾಲಾರ್ಪಣೆ ಮಾಡಿದ್ದರು. ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪಗುಚ್ಚ ಅರ್ಪಿಸಿ ಪ್ರಿಯಾಂಕಾ ತೆರಳಿದರು.
ನಂತರ ಸ್ಥಳಕ್ಕೆ ಧಾವಿಸಿದ ಕೆಲ ಬಿಜೆಪಿ ಕಾರ್ಯಕರ್ತರು, ಶಾಸ್ತ್ರಿ ಅವರ ಪ್ರತಿಮೆಗೆ ಗಂಗಾಜಲ ಸಿಂಪಡಿಸಿ ಶುದ್ಧೀಕರಿಸಿದ್ದಾರೆ, ಇದೇ ವೇಳೆ ಕಾಂಗ್ರೆಸ್ ವಿರುದ್ಧ ಘೋಷಣೆ ಕೂಗಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com