ಪ್ರತಿದಾಳಿಯಲ್ಲಿ 12 ಪಾಕ್ ಸೈನಿಕರ ಹತ್ಯೆಗೈದ ಭಾರತೀಯ ಯೋಧರು!

ಅಂತಾರಾಷ್ಟ್ರೀಯ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸುತ್ತಿದ್ದ ಪಾಕಿಸ್ತಾನದ ಸೈನಿಕರ ಮೇಲೆ ಭಾರತೀಯ ಯೋಧರು ಗುಂಡಿನ ಮಳೆಗೈದಿದ್ದು ಪರಿಣಾಮ 12 ಮಂದಿ ಪಾಕ್...
ಭಾರತೀಯ ಸೇನೆ
ಭಾರತೀಯ ಸೇನೆ
Updated on
ನವದೆಹಲಿ: ಅಂತಾರಾಷ್ಟ್ರೀಯ ಗಡಿಯಲ್ಲಿ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸುತ್ತಿದ್ದ ಪಾಕಿಸ್ತಾನದ ಸೈನಿಕರ ಮೇಲೆ ಭಾರತೀಯ ಯೋಧರು ಗುಂಡಿನ ಮಳೆಗೈದಿದ್ದು ಪರಿಣಾಮ 12 ಮಂದಿ ಪಾಕ್ ಸೈನಿಕರು ಮೃತಪಟ್ಟಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಸುಂದರ್ ಬನಿ ವಲಯದಲ್ಲಿ ಗುರುವಾರ ಪಾಕ್ ಸೈನಿಕರು ಗುಂಡಿನ ದಾಳಿ ನಡೆಸಿದ್ದರು. ಇದಕ್ಕೆ ಪ್ರತ್ಯುತ್ತರವಾಗಿ ಭಾರತೀಯ ಯೋಧರು ಗುಂಡಿನ ದಾಳಿ ನಡೆಸಿದ್ದು ಇದರಲ್ಲಿ ಪಾಕ್ ನ ಇಬ್ಬರು ಸೇನಾ ಅಧಿಕಾರಿಗಳು ಸೇರಿದಂತೆ 12 ಸೈನಿಕರಿಗೆ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ಜೊತೆಗೆ ಈ ದಾಳಿಯಲ್ಲಿ 22 ಜನ ಪಾಕ್ ಯೋಧರು ಗಂಭೀರವಾಗಿ ಗಯಗೊಂಡಿದ್ದಾರೆ ಎಂದು ಗುಪ್ತಚರ ಮೂಲಗಳು ತಿಳಿಸಿವೆ.
ಯಾರಿಗೂ ತಿಳಿಯದಂತೆ ಪಾಕಿಸ್ತಾನದ ಮಿ-17 ಹೆಲಿಕಾಪ್ಟರ್ ಮೂಲಕ ಪಾಕ್ ಸೇನೆ ಮೃತ ಸೈನಿಕರ ಮೃತದೇಹವನ್ನು ಸುಂದರಬನಿ ವಲಯದಿಂದ ರಾವಲ್ಪಿಂಡಿಗೆ ಸಾಗಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com