ಮಾಜಿ ಪ್ರಧಾನಿಗೆ ಪ್ರಿಯಾಂಕಾ ಅವಮಾನ: ಮಹಿಳೆ ಮುಟ್ಟಿದ್ದೆಲ್ಲಾ ಮೈಲಿಗೆಯಲ್ಲ; ಸ್ಮೃತಿಗೆ ರಮ್ಯಾ ಟಾಂಗ್!

ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ತಮ್ಮ ಕೊರಳಿನಲ್ಲಿದ್ದ ಹೂವಿನ ಹಾರವನ್ನು ತೆಗೆದು ದಿವಂಗತ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ...
ರಮ್ಯಾ, ಸ್ಮೃತಿ ಇರಾನಿ
ರಮ್ಯಾ, ಸ್ಮೃತಿ ಇರಾನಿ
Updated on
ಬೆಂಗಳೂರು: ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ತಮ್ಮ ಕೊರಳಿನಲ್ಲಿದ್ದ ಹೂವಿನ ಹಾರವನ್ನು ತೆಗೆದು ದಿವಂಗತ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಪ್ರತಿಮೆಗೆ ಹಾಕಿದ್ದು ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. 
ಇದಕ್ಕೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಪ್ರಿಯಾಂಕಾ ಗಾಂಧಿಯನ್ನು ತರಾಟೆಗೆ ತೆಗೆದುಕೊಂಡಿದ್ದು ಮಾಜಿ ಪ್ರಧಾನಿಗೆ ಮಾಡಿದ ಅವಮಾನ ಎಂದು ಹೇಳಿದ್ದರು. ಅಲ್ಲದೆ ಪ್ರಿಯಾಂಕಾ ವಾದ್ರಾರ ವಿಡಿಯೋವನ್ನು ಟ್ವೀಟ್ ಮಾಡಿ ಕಿಡಿಕಾರಿದ್ದರು.
ಸ್ಮೃತಿ ಇರಾನಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಾಜಿ ಸಂಸದೆ, ನಟಿ ರಮ್ಯಾ ಅವರು ಸ್ಮೃತಿ ಇರಾನಿ ಮಹಿಳೆಯರು ಮಾಡುವ ಕೆಲಸದಲ್ಲಿ ಕೆಟ್ಟದ್ದನ್ನೇ ಹುಡುಕುತ್ತಾರೆ. ಮಹಿಳೆ ಮುಟ್ಟಿದ ಹಾರವನ್ನು ಪ್ರತಿಮೆಗೆ ಹಾಕಿದಾಕ್ಷಣ ಅದು ಮೈಲಿಗೆಯಾಗುವುದಿಲ್ಲ. ನಮ್ಮ ದೇಹವೇ ದೇಗುಲ ಎಂದು ಹಿಂದೂ ಧರ್ಮ ಹೇಳುತ್ತದೆ. ದೇವರು ಎಲ್ಲಾ ಕಡೆ ಇದ್ದಾನೆ. ಪ್ರಿಯಾಂಕಾ ಮಾಡಿದರಲ್ಲಿ ಅವಮಾನ ಮಾಡುವಂತದ್ದು ಏನಿದೆ? ನೀವೂ ಕೂಡಾ ಮಹಿಳೆ ಎಂದು ರಮ್ಯಾ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com