ಮತ್ತೆ ಪಾಕ್ ಸೇನೆಯ ಉದ್ಧಟತನ: ಪೂಂಛ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘನೆ, ಓರ್ವ ಸೈನಿಕ ಹುತಾತ್ಮ

ಗಡಿ ನಿಯಂತ್ರಣ ರೇಖೆಯಲ್ಲಿ ಮತ್ತೆ ಪಾಕಿಸ್ತಾನ ಸೇನೆ ಉದ್ಧಟತನ ತೋರಿದ್ದು, ಪೂಂಛ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿದೆ. ಪರಿಣಾಮ ಭಾರತೀಯ ಸೇನೆ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಶ್ರೀನಗರ: ಗಡಿ ನಿಯಂತ್ರಣ ರೇಖೆಯಲ್ಲಿ ಮತ್ತೆ ಪಾಕಿಸ್ತಾನ ಸೇನೆ ಉದ್ಧಟತನ ತೋರಿದ್ದು, ಪೂಂಛ್ ಸೆಕ್ಟರ್ ನಲ್ಲಿ ಕದನ ವಿರಾಮ ಉಲ್ಲಂಘನೆ ಮಾಡಿದೆ. ಪರಿಣಾಮ ಭಾರತೀಯ ಸೇನೆ ಓರ್ವ ಸೈನಿಕ ಹುತಾತ್ಮರಾಗಿದ್ದಾರೆ ಎಂದು ತಿಳಿದುಬಂದಿದೆ.
ಕಾಶ್ಮೀರದ ಪೂಂಛ್ ಸೆಕ್ಟರ್ ನಲ್ಲಿ ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ದಾಳಿ ಮಾಡಿದೆ. ಗಡಿಯಲ್ಲಿ ತೀವ್ರ ಪ್ರಮಾಣದಲ್ಲಿ ಶೆಲ್ಲಿಂಗ್ ದಾಳಿಯಾಗುತ್ತಿದ್ದು, ಪಾಕ್ ಸೇನೆಗೆ ಭಾರತೀಯ ಸೇನೆಯ ಸೈನಿಕರೂ ಕೂಡ ದಿಟ್ಟ ಉತ್ತರ ನೀಡುತ್ತಿದ್ದಾರೆ. ರಜೌರಿ ಜಿಲ್ಲೆಯಲ್ಲೂ ತೀವ್ರ ಗುಂಡಿನ ಚಕಮಕಿ ನಡೆಯುತ್ತಿದ್ದು, ಪಾಕಿಸ್ತಾನದ ಶೆಲ್ ದಾಳಿಗೆ ಇಲ್ಲಿನ ಹಲವು ಗ್ರಾಮಗಳಲ್ಲಿನ ಮನೆಗಳಿಗೆ ಹಾನಿಯಾಗಿದೆ.
ಇನ್ನು ಕಳೆದ ಫೆಬ್ರವರಿ 26 ಭಾರತೀಯ ವಾಯುಸೇನೆಯ ವಾಯುದಾಳಿ ಬಳಿಕ ಗಡಿಯಲ್ಲಿ ತೀವ್ರ ಪ್ರಮಾಣದಲ್ಲಿ ಗುಂಡಿನ ಚಕಮಕಿ ನಡೆಯುತ್ತಿದೆ. ಇದಕ್ಕೆ ಸೇನೆ ಕೂಡ ಪ್ರತಿದಾಳಿ ನಡೆಸಿದ್ದು, ನಿನ್ನೆ ಭಾರತೀಯ ಸೈನಿಕರ ಪ್ರತಿದಾಳಿಯಲ್ಲಿ ಪಾಕಿಸ್ತಾನದ 12 ಮಂದಿ ಸೈನಿಕರು ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com