ಆರ್ ಬಿ ಐ ಗೌರ್ನರ್ ಶಕ್ತಿಕಾಂತ್ ದಾಸ್ ನೇಮಕದ ಬಗ್ಗೆ ಮಾಹಿತಿ ನೀಡಲು ಕೇಂದ್ರ ಸರ್ಕಾರ ನಕಾರ

ಆರ್ ಬಿಐ ಗೌರ್ನರ್ ಶಕ್ತಿಕಾಂತ್ ದಾಸ್ ನೇಮಕಕ್ಕೆ ಸಂಬಂಧಿಸಿದಂತೆ ವಿವರಗಳನ್ನು ಹಂಚಿಕೊಳ್ಳಲು ಕೇಂದ್ರವು ನಿರಾಕರಿಸಿದೆ.
ಶಕ್ತಿಕಾಂತ್ ದಾಸ್
ಶಕ್ತಿಕಾಂತ್ ದಾಸ್
Updated on
ನವದೆಹಲಿ: ಆರ್ ಬಿಐ  ಗೌರ್ನರ್ ಶಕ್ತಿಕಾಂತ್ ದಾಸ್ ನೇಮಕಕ್ಕೆ ಸಂಬಂಧಿಸಿದಂತೆ ವಿವರಗಳನ್ನು ಹಂಚಿಕೊಳ್ಳಲು ಕೇಂದ್ರವು ನಿರಾಕರಿಸಿದೆ.
ಮಂತ್ರಿಗಳು, ಕಾರ್ಯದರ್ಶಿಗಳು ಮತ್ತು ಇತರ ಅಧಿಕಾರಿಗಳನ್ನೊಳಗೊಂಡ ದಾಖಲೆಗಳನ್ನು ಹಂಚಿಕೊಳ್ಳುವುದು ಪಾರದರ್ಶಕ ಕಾನೂನಿನ ಉಲ್ಲಂಘನೆಯಾಗುತ್ತದೆ ಎಂದು ಹೇಳಲಾಗಿದೆ
ಹಣಕಾಸು ಸೇವಾ ನಿಯಂತ್ರಣ ನೇಮಕ ಶೋಧನಾ ಸಮಿತಿ- ಎಫ್ ಎಸ್ ಆರ್ ಎಎಸ್ ಸಿ ಶಿಫಾರಸ್ಸಿನ ಆಧಾರದ ಮೇಲೆ  ಕೇಂದ್ರ ಸಂಪುಟ  ಆರ್ ಬಿಐ ಗೌರ್ನರ್ ಆಯ್ಕೆ ಮಾಡುತ್ತದೆ ಎಂದು  ಹಣಕಾಸು ಸೇವಾ ಇಲಾಖೆ ತಿಳಿಸಿದೆ.
ಸಂಪುಟ ಕಾರ್ಯದರ್ಶಿ ಈ ಸಮಿತಿ ಅಧ್ಯಕ್ಷರಾಗಿದ್ದು, ಪ್ರಧಾನ ಮಂತ್ರಿಗಳ ಹೆಚ್ಚುವರಿ ಪ್ರಧಾನ ಕಾರ್ಯದರ್ಶಿ ಹಾಗೂ ಇಲಾಖೆಯ ಕಾರ್ಯದರ್ಶಿ ಹಾಗೂ ಹೊರಗಿನ ಮೂವರು ತಜ್ಞರು ಇದರ ಸದಸ್ಯರಾಗಿರುತ್ತಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com