ಮುಖ್ಯಮಂತ್ರಿಯ ಶಿಫಾರಸ್ಸಿನ ಮೇರೆಗೆ ಧವಳಿಕಾರ್ ಅವರನ್ನು ರಾಜ್ಯಪಾಲ ಮೃದುಲಾ ಸಿನ್ಹಾ ಸಂಪುಟದಿಂದ ತೆಗೆದುಹಾಕಿದ್ದಾರೆ. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಧವಳಿಕಾರ್, ಎಂಜಿಪಿ ಮೇಲೆ ಚೌಕಿದಾರರುಗಳು ದೌರ್ಜನ್ಯ ಮಾಡಿದ್ದಾರೆ. ಇದಕ್ಕೆ ಜನರು ಪಾಠ ಕಲಿಸಲಿದ್ದಾರೆ ಎಂದರು. ಬಿಜೆಪಿ ಕುತಂತ್ರ ರಾಜಕಾರಣ ಮಾಡಿ ಗೋವಾ ಜನರಿಗೆ ಆಘಾತ ಉಂಟು ಮಾಡಿದೆ. ಇದಕ್ಕೆ ಅದು ತಕ್ಕ ಬೆಲೆ ತೆರಬೇಕು. ಜನತೆ ಎಲ್ಲವನ್ನು ನೋಡುತ್ತಿದ್ದಾರೆ ಎಂದರು. ಎಂ.ಜಿ.ಪಿ ಯ ಮೂವರು ಶಾಸಕರಲ್ಲಿ ಇಬ್ಬರು ಇಂದು ಪಕ್ಷದಿಂದ ಬೇರೆಯಾಗಿ ಭಾರತೀಯ ಜನತಾ ಪಕ್ಷ(ಬಿಜೆಪಿ) ಸೇರಿದ್ದಾರೆ.