ನೀತಿ ಸಂಹಿತೆ ಉಲ್ಲಂಘಿಸಿ,ಅಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸಿದ ಕೇಂದ್ರ ಸಚಿವ

ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕಾರನ್ನು ತಡೆಗಟ್ಟಿದ್ದ ಹಿನ್ವೆಲೆಯಲ್ಲಿ ಕೇಂದ್ರ ಸಚಿವ ಅಶ್ವಿನಿ ಚೌಬೆ ಉಪ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಅಶ್ವಿನಿ ಕುಮಾರ್ ಚೌಬೆ
ಅಶ್ವಿನಿ ಕುಮಾರ್ ಚೌಬೆ
Updated on

ಬಿಹಾರ:ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಕಾರನ್ನು  ತಡೆಗಟ್ಟಿದ್ದ ಹಿನ್ವೆಲೆಯಲ್ಲಿ ಕೇಂದ್ರ ಸಚಿವ ಅಶ್ವಿನಿ ಚೌಬೆ ಉಪ ಜಿಲ್ಲಾ ಮ್ಯಾಜಿಸ್ಟ್ರೇಟ್ ಅಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.

ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಕಾರಿನ ಸೀಟಿನ ಮುಂಭಾಗ ಕುಳಿತುಕೊಂಡಿದ್ದ  ಕೇಂದ್ರ ಸಚಿವರು ಚುನಾವಣಾ ಆಯೋಗದ ಆದೇಶವನ್ನು ಪ್ರಶ್ನಿಸಿದಲ್ಲದೇ, ಅಧಿಕಾರಿಗಳೊಂದಿಗೆ ಆಕ್ರೋಶಭರಿತವಾಗಿ ಮಾತನಾಡಿರುವುದು ವಿಡಿಯೋದಲ್ಲಿ ದಾಖಲಾಗಿದೆ.

ಯಾವ ವಿವಾದ ?  ಇದನ್ನ ಯಾರು ಆದೇಶ ಮಾಡಿತ್ತು , ಏನಾದರೂ ಆಗಿದಲ್ಲೀ ಜೈಲಿನ ಕಳುಹಿಸಿ, ಇದು ನನ್ನ ಕಾರು  ವಶಕ್ಕೆ ಪಡೆಯಲು ಸಾಧ್ಯವಿಲ್ಲ ಎಂದು ಚೌಬೆ ಅಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್ ಡಿಎಂ ಕೆಕೆ ಉಪಾಧ್ಯಾಯ , ಕಾನೂನು ಪ್ರಕಾರ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.ವಾಹನಗಳಿಗೆ ಯಾವುದೇ ಅನುಮತಿ ನೀಡಿಲ್ಲ. ಆದರೆ, ಜಿಲ್ಲಾ ಮೈದಾನದಲ್ಲಿ ಹಲವು ವಾಹನಗಳು ನಿಂತಿದ್ದ ಬಗ್ಗೆ ಮಾಹಿತಿ ಇದೆ. ಈ ಬಗ್ಗೆ  ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಬಕ್ಸಾರ್ ಕ್ಷೇತ್ರದ ಸಂಸದರಾಗಿರುವ ಅಶ್ವಿನಿ ಕುಮಾರ್ ಚೌಬೆ 2019 ಲೋಕಸಭಾ ಚುನಾವಣೆಯಲ್ಲೂ ಮತ್ತೆ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com