ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ನಿರುದ್ಯೋಗಿಗಳಿಗೆ ಕನಿಷ್ಟ ಆದಾಯ ನೀಡುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಮಹತ್ವಾಕಾಂಕ್ಷೆಯ ಎನ್ ವೈಎ ವೈ ಯೋಜನೆ ಜಾರಿಗೆ ಬರಲಿದೆ. ಇದರಿಂದ ಮಾಸಿಕ 6,000 ರೂಪಾಯಿ ಹಣ ಸಿಗಲಿದ್ದು, ಈ ಹಣದಿಂದ ಪತ್ನಿ ಹಾಗೂ ಪುತ್ರಿಗೆ ಕೋರ್ಟ್ ಸೂಚಿಸಿದಷ್ಟು ಜೀವನ ನಿರ್ವಹಣೆಗಾಗಿ ಹಣ ನೀಡುವುದಾಗಿ ಆನಂದ್ ಶರ್ಮಾ ಹೇಳಿದ್ದಾರೆ. ತನ್ನ ಖಾತೆಯಿಂದ ಈ ಹಣವನ್ನು ಪತ್ನಿಯ ಖಾತೆಗೆ ನೇರ ವರ್ಗಾವಣೆ ಮಾಡುವುದಕ್ಕೂ ತಾನು ಬಯಸುತ್ತೇನೆ ಎಂದು ಶರ್ಮಾ ತಿಳಿಸಿದ್ದಾರೆ. ಶರ್ಮಾ ಸಲ್ಲಿಸಿರುವ ಅರ್ಜಿಯನ್ನು ಕೋರ್ಟ್ ಮಾನ್ಯ ಮಾಡಿದೆ. ಆನಂದ್-ದೀಪ್ ಮಾಲಾ 2006 ರಲ್ಲಿ ವಿವಾಹವಾಗಿದ್ದರು. ದೀಪ್ ಮಾಲಾ ವಿಚ್ಛೇದನ ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಚ್ಛೇದನ ಪಡೆಯುತ್ತಿರುವ ಹಿನ್ನೆಲೆಯಲ್ಲಿ ಜೀವನಾಂಶ ನೀಡುವಂತೆ ಕೋರ್ಟ್ ಆನಂದ್ ಶರ್ಮಾಗೆ ಸೂಚಿಸಿತ್ತು.