ಸೆಲೆಬ್ರಿಟಿಗಳ ಮದುವೆಗೆ ಹೋಗುವ ಬದಲು ಪ್ರಧಾನಿ ರೈತರ ಮನೆಗೆ ಭೇಟಿ ನೀಡಲಿ: ತೇಜಸ್ವಿ ಯಾದವ್

ದೇಶದ ಸೆಲೆಬ್ರಿಟಿಗಳ ಮದುವೆಗೆ ಹೋಗುವ ಬದಲು ಪ್ರಧಾನಿ ನರೇಂದ್ರ ಮೋದಿ ರೈತರ ಮನೆಗೆ ತೆರಳಿ ಅವರ ಕಷ್ಟ ಸುಖ ವಿಚಾರಿಸಲಿ ಎಂದು ಆರ್ ಜೆಡಿ ನಾಯಕ ತೇಜಸ್ವಿ ...
ತೇಜಸ್ವಿ ಯಾದವ್
ತೇಜಸ್ವಿ ಯಾದವ್
Updated on
ಪಾಟ್ನಾ: ದೇಶದ ಸೆಲೆಬ್ರಿಟಿಗಳ ಮದುವೆಗೆ ಹೋಗುವ ಬದಲು ಪ್ರಧಾನಿ ನರೇಂದ್ರ ಮೋದಿ ರೈತರ ಮನೆಗೆ ತೆರಳಿ ಅವರ ಕಷ್ಟ ಸುಖ ವಿಚಾರಿಸಲಿ ಎಂದು ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ತೇಜಸ್ವಿ ಯಾದವ್, ಪ್ರಿಯಾಂಕಾ ಚೋಪ್ರಾ ಅವರಂತಹ ಮದುವೆಗಳಿಗೆ ಹಾಜರಾಗುವ ಬದಲು ರೈತರ ಕಷ್ಟ ಸುಖ ಕೇಳಲಿ ಎಂದು ಹೇಳಿದ್ದಾರೆ.
ಮೋದಿ ಅವರಿಗೆ ದೇಶಕ್ಕೆ ಪ್ರಧಾನಿಯಾಗಲು ಅರ್ಹರಲ್ಲ, ಅವರ ತಮ್ಮ ಘನತೆಗೆ ತಕ್ಕನಾಗಿ ನಡೆದುಕೊಳ್ಳುತ್ತಿಲ್ಲ, ಸುಮ್ಮನೆ ನಮ್ಮ ಕುಟುಂಬದ ಬಗ್ಗೆ ಮಾತನಾಡಿ ಸಮಯ ಹಾಳು ಮಾಡುವ ಬದಲು ಅದೇ ಸಮಯವನ್ನು ದೇಶದ ಅಭಿವೃದ್ಧಿಗಾಗಿ ಬಳಸಲಿ, ನಿರುದ್ಯೋಗ, ರೈತರ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಮೋದಿ ಕೆಲಸ ಮಾಡಲಿ, ಬಿಹಾರಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಲಿ ಎಂದು ಸಲಹೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com