ಚಂಡಮಾರುತ ಪ್ರಭಾವದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆಯು ಕಳೆದ ಎರಡು ದಿನಗಳಿಂದ ಒಡಿಶಾ, ಆಂಧ್ರ ಪ್ರದೇಶ, ಪಶ್ಚಿಮ ಬಂಗಾಳದ ಮಾರ್ಗಗಳಲ್ಲಿ ಸಂಚರಿಸುವ 89 ರೈಲುಗಳ ಸಂಚಾರವನ್ನು ರದ್ದುಪಡಿಸಿದೆ. ಹಲವು ರೈಲುಗಳ ಮಾರ್ಗ ಬದಲಿಸಲಾಗಿದ್ದು, ಈ ವರೆಗೂ ಸುಮಾರು 220 ರೈಲುಗಳ ಸಂಚಾರ ಸ್ಥಗಿತವಾಗಿದೆ. ಸಂತ್ರಸ್ತರ ರಕ್ಷಣೆಗೆಂದೇ ಮೂರು ವಿಶೇಷ ರೈಲುಗಳನ್ನುಸೇವೆಗೆ ನಿಯೋಜಿಸಲಾಗಿದ್ದು, ರೈಲಿನಲ್ಲಿ ಎಲ್ಲ ರೀತಿಯ ಸೌಲಭ್ಯಗಳಿರುವಂತೆ ಮುಂಜಾಗ್ರತೆ ವಹಿಸಲಾಗಿದೆ.