ಲಕ್ನೋ: ಫನಿ ಚಂಡಮಾರುತದ ಎಫೆಕ್ಟ್ ಉತ್ತರ ಪ್ರದೇಶದಲ್ಲಿ ಭಾರೀ ಅನಾಹುತ ಸೃಷ್ಟಿಸಿದೆ, ಉತ್ತರ ಪ್ರದೇಶದಲ್ಲಿ ಸಿಡಿಲಿಗೆ 8 ಮಂದಿ ಬಲಿಯಾಗಿದ್ದಾರೆ..ಚಾಂದೌಳಿ ಮತ್ತು ಸೋನ್ ಭಾದ್ರಾದಲ್ಲಿ ಸಿಡಿಲಿಗೆ 8 ಮಂದಿ ಸಾವನ್ನಪ್ಪಿದ್ದಾರೆ, ಈಗಾಗಲೇ ಹವಾಮಾನ ಇಲಾಖೆ, ಮುಂದಿನ 2 ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ..ಸಿಡಿಲು ಬಡಿದಾಗ ನಾಲ್ಕು ಮಂದಿ ಸಾವನ್ನಪ್ಪಿದರು, ಇನ್ನೂ ಐದು ಮಂದಿ ಗಂಬೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ..ಇನ್ನೂ ಎರಡನೇ ಘಟನೆಯಲ್ಲಿ ಸಿಡಿಲು ಬಡಿದು ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ, ಇವರ ಜೊತೆಗೆ ಓರ್ವ ವೃದ್ಧ ಹಾಗೂ ಇಬ್ಬರು ಸಹೋದರರು ಕೂಡ ಸಿಡಿಲಿಗೆ ಬಲಿಯಾಗಿದ್ದಾರೆ. .Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos