ಪ್ರಮುಖವಾಗಿ ಚಂಡಮಾರುತ ಅಬ್ಬರಕ್ಕೆ ತತ್ತರಿಸಿ ಹೋಗಿದ್ದ ಪುರಿ ಮತ್ತು ಖುರ್ದಾ ಜಿಲ್ಲೆಗಳಲ್ಲಿ ಭಾರಿ ಅವಾಂತರ ಸೃಷ್ಟಿಯಾಗಿದ್ದು, ಇಲ್ಲಿ ಕಳೆದೊಂದು ವಾರದಿಂದ ವಿದ್ಯುತ್ ಸಂಪರ್ಕ ಕಡಿತವಾಗಿದೆ. ಈ ಎರಡು ಜಿಲ್ಲೆಗಳಲ್ಲೇ ಸುಮಾರು 1.56 ಲಕ್ಷ ವಿದ್ಯುತ್ ಕಂಬಗಳು ನೆಲಕ್ಕುರುಳಿಸಿದ್ದು, ಸಾವಿರಾರು ಮರಗಳು ಧರೆಗುರುಳಿವೆ. ಇದೀಗ ಇಲ್ಲಿ ವಿದ್ಯುತ್ ಸಂಪರ್ಕ ಕಲ್ಪಿಸಲು ಒಡಿಶಾ ಸರ್ಕಾರಕ್ಕೆ ದೊಡ್ಡ ಸವಾಲಾಗಿ ಮಾರ್ಪಟ್ಟಿದ್ದು, ಸಿಬ್ಬಂದಿಗಳ ಮತ್ತು ನಿಧಿಯ ಕೊರತೆ ಎದುರಾಗಿದೆ.