ಈ ಹಿಂದೆ ಅಂದರೆ ಕಳೆದ ಏಪ್ರಿಲ್ 30ರಂದು ನಡೆದಿದ್ದ ವಿಚಾರಣೆಯಲ್ಲಿ 'ಚೌಕಿದಾರ್ ಚೋರ್' ಹೇಳಿಕೆ ಸಂಬಂಧ ಸುಪ್ರೀಂಕೋರ್ಟ್ ನಲ್ಲಿ ನಡೆದ ವಿಚಾರಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ ನ್ಯಾಯಪೀಠದ ಮುುಂದೆ ಕ್ಷಮೆ ಕೋರಿದ್ದರು. ಆದರೆ ತಮ್ಮ ಹೇಳಿಕೆ ಕುರಿತು ನೇರವಾಗಿ ತಪ್ಪೊಪ್ಪಿಕೊಳ್ಳದ ರಾಹುಲ್ ಗಾಂಧಿ ಅವರ ನಡೆ ಬಗ್ಗೆ ಸುಪ್ರೀಂ ಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತ್ತು. ಈ ವೇಳೆ, ಸಿಜೆಐ ರಂಜನ್ ಗೊಗೊಯಿ ನೇತೃತ್ವದ ಪೀಠವು, 'ನೀವು ತಪ್ಪು ಮಾಡಿದ್ದರೆ, ಒಪ್ಪಿಕೊಳ್ಳಬೇಕು.. ಪ್ರಮಾಣಪತ್ರದಲ್ಲಿನ ನಿಮ್ಮ ಸಮರ್ಥನೆಗಳನ್ನು ಅರ್ಥ ಮಾಡಿಕೊಳ್ಳುವುದು ನಮಗೆ ಕಷ್ಟವಾಗುತ್ತಿದೆ. ಪ್ರಮಾಣಪತ್ರದಲ್ಲಿ ಉಲ್ಲೇಖಿಸಿರುವ ರಾಜಕೀಯ ನಿಲುವುಗಳು ನಮಗೆ ಸಂಬಂಧವಿಲ್ಲದ್ದು.. ನಮ್ಮ ತೀರ್ಪಿನಲ್ಲಿ ಚೌಕಿದಾರ್ ಚೋರ್ ಎಂದು ಎಲ್ಲಿ ಹೇಳಿದ್ದೇವೆ? ಎಲ್ಲ ಹೇಳಿಕೆಗಳನ್ನು ಪೀಠವೇ ಹೇಳಿದೆ ಎಂದು ನೀವು ಹೇಗೆ ಹೇಳುತ್ತೀರಿ.. ಎಂದು ಪ್ರಶ್ನಿಸಿದ್ದರು. ಅಲ್ಲದೆ ರಾಹುಲ್ ಗಾಂಧಿ ಅವರು ಸಲ್ಲಿಕೆ ಮಾಡಿರುವ ಪ್ರಮಾಣಪತ್ರದ ಕುರಿತೂ ಅಸಮಾಧಾನ ವ್ಯಕ್ತಪಡಿಸಿರುವ ಕೋರ್ಟ್, 'ಪ್ರಮಾಣಪತ್ರದಲ್ಲಿ ಬಳಸಿರುವ 'ವಿಷಾದ' ಪದದ ಅರ್ಥವೇನು?.. ಕಾಂಗ್ರೆಸ್ ಅಧ್ಯಕ್ಷರು ಒಂದು ಹಂತದಲ್ಲಿ ತಮ್ಮ ತಪ್ಪನ್ನು ಒಪ್ಪಿಕೊಳ್ಳುತ್ತಿದ್ದಾರೆ. ಆದರೆ, ಇನ್ನೊಂದೆಡೆ ನಿಂದನೆಯ ಹೇಳಿಕೆ ನೀಡಿಲ್ಲ ಎಂದು ಪ್ರತಿಪಾದಿಸುತ್ತಿದ್ದಾರೆ' ಎಂದು ಅಸಮಾಧಾನ ವ್ಯಕ್ತಪಡಿಸಿತ್ತು.