ಘಟನೆಯಲ್ಲಿ ನಟ ಕಮಲ್ ಹಾಸನ್ ಸೇರಿದಂತೆ ಯಾರಿಗೂ ಯಾವುದೇ ರೀತಿಯ ಹಾನಿಯಾಗಿಲ್ಲ. ಸ್ಥಳದಲ್ಲಿದ್ದ ಪೊಲೀಸರು ಕೂಡಲೇ ಕಾರ್ಯ ಪ್ರವೃತ್ತರಾಗಿ ಕಮಲ್ ಹಾಸನ್ ರನ್ನು ಸುರಕ್ಷಿತವಾಗಿ ಬೇರೆಡೆ ರವಾನೆ ಮಾಡಿದ್ದಾರೆ. ಇನ್ನು ಸ್ಥಳದಲ್ಲಿದ್ದ ಎಂಎನ್ ಎಂ ಕಾರ್ಯಕರ್ತರು ಕಲ್ಲು ಮೊಟ್ಟೆ ತೂರಿದ ಇಬ್ಬರು ಶಂಕಿತರನ್ನು ಹಿಡಿದು ಹಲ್ಲೆಗೆ ಮುಂದಾಗಿದ್ದಾರೆ. ಕೂಡಲೇ ಪೊಲೀಸರು ಅವರನ್ನು ವಶಕ್ಕೆ ಪಡೆದು ರಕ್ಷಿಸಿದ್ದಾರೆ. ಅಲ್ಲದೆ ವಿಚಾರಣೆ ಬಳಿಕ ಬಿಡುಗಡೆ ಮಾಡಿದ್ದಾರೆ ಎನ್ನಲಾಗಿದೆ.