ಪ್ರಗ್ಯಾ ಸಿಂಗ್ ಗೋಡ್ಸೆ ಬೆಂಬಲಕ್ಕೆ ನಿಲ್ಲುವ ಮೂಲಕ ಅಹಿಂಸೆ, ಶಾಂತಿ, ಸಹಿಷ್ಣುತೆಯನ್ನು ಹೊಂದಿರುವ ಬಾಪೂಜಿಯ ಆತ್ಮವನ್ನು ಕೊಲ್ಲುತ್ತಿದ್ದಾರೆ. ಗಾಂಧಿಜೀ ಅವರು ಅಧಿಕಾರ ಮತ್ತು ರಾಜಕೀಯಕ್ಕಿಂತಲೂ ಎತ್ತರದ ಸ್ಥಾನದಲ್ಲಿದ್ದಾರೆ. ಬಿಜೆಪಿ ರಾಜಕೀಯ ಲಾಭವನ್ನು ಬದಿಗಿರಿಸಿ ಅವರನ್ನು ಪಕ್ಷದಿಂದ ಹೊರಹಾಕಿ ರಾಜಧರ್ಮವನ್ನು ಪಾಲಿಸಬೇಕಾಗಿತ್ತು ಎಂದು ಕೈಲಾಶ್ ಸತ್ಯಾರ್ಥಿ ಕಿಡಿ ಕಾರಿದ್ದಾರೆ.