ಹಿಂದೂ ಉಗ್ರ ಹೇಳಿಕೆಗೆ ಸಂಬಂಧಿಸಿದಂತೆ ಕಮಲ್ ಹಾಸನ್ ಅವರ ವಿರುದ್ಧ ಕರೂರ್ ಜಿಲ್ಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಪರಿಣಾಮ ಬಂಧನದ ಭೀತಿಯಲ್ಲಿದ್ದ ಕಮಲ್ ಹಾಸನ್ ಅವರು ಮುಂಜಾಗ್ರತಾ ಕ್ರಮವಾಗಿ ಕಮಲ್ ಮದ್ರಾಸ್ ಹೈಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಮಧುರೈ ಪೀಠ ನಟ ಕಮಲ್ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿ ಆದೇಶಿಸಿದೆ.