ಕಾಂಗ್ರೆಸ್‌, ನ್ಯಾಶನಲ್‌ ಹೆರಾಲ್ಡ್‌ ವಿರುದ್ಧ ಮಾನನಷ್ಟ ಮೊಕದ್ದಮೆ ಹಿಂಪಡೆದ ಅನಿಲ್‌ ಅಂಬಾನಿ

ರಾಫೆಲ್ ಡೀಲ್ ಗೆ ಕುರಿತ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕರು ಹಾಗೂ ನ್ಯಾಶನಲ್‌ ಹೆರಾಲ್ಡ್‌ ಪತ್ರಿಕೆಯ ವಿರುದ್ಧ....
ಅನಿಲ್ ಅಂಬಾನಿ
ಅನಿಲ್ ಅಂಬಾನಿ
Updated on
ಅಹ್ಮದಾಬಾದ್‌: ರಾಫೆಲ್ ಡೀಲ್ ಗೆ ಕುರಿತ ವಿವಾದಾತ್ಮಕ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕರು ಹಾಗೂ ನ್ಯಾಶನಲ್‌ ಹೆರಾಲ್ಡ್‌ ಪತ್ರಿಕೆಯ ವಿರುದ್ಧ ಅಹ್ಮದಾಬಾದ್‌ ಕೋರ್ಟ್ ನಲ್ಲಿ ದಾಖಲಿಸಿದ್ದ 5 ಸಾವಿರ ಕೋಟಿ ರುಪಾಯಿಗಳ ಮಾನನಷ್ಟ ಮೊಕದ್ದಮೆ ಪ್ರಕರಣವನ್ನು ಹಿಂಪಡೆಯಲು ಅನಿಲ್‌ ಅಂಬಾನಿ ಅವರ ರಿಲಯನ್ಸ್‌ ಗ್ರೂಪ್‌ ನಿರ್ಧರಿಸಿದೆ.
ಅಹ್ಮದಾಬಾದ್‌ ಸಿಟಿ ಸಿವಿಲ್‌ ಮತ್ತು ಸೆಶನ್ಸ್‌ ನ್ಯಾಯಾಧೀಶ ಪಿ ಜೆ ತಮಕುವಾಲಾ ಅವರು ಈ ಸಿವಿಲ್ ಮಾನನಷ್ಟ ಮೊಕದ್ದಮೆ ಪ್ರಕರಣದ ವಿಚಾರಣೆ ನಡೆಸುತ್ತಿದ್ದರು.
ಪ್ರತಿವಾದಿಗಳಿಗೆ ನಾವು ಮಾನಹಾನಿ ಪ್ರಕರಣವನ್ನು ಹಿಂಪಡೆಯುತ್ತಿವುದಾಗಿ ತಿಳಿಸಿದ್ದೇವೆ ಎಂದು ದೂರದಾರರ ಪರ ವಕೀಲ ರಸೇಶ್‌ ಪಾರಿಖ್‌ ಅವರು ಇಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com