ಅಮೇಥಿ: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ದ ಅಮೇಥಿಯಿಂದ ಬಿಜೆಪಿ ಅಭ್ಯರ್ಥಿಯಾಗಿದ್ದ ಸ್ಮೃತಿ ಇರಾನಿ ಅವರು ಭರ್ಜರಿ ಗೆಲುವು ಸಾಧಿಸಿದ್ದು ಈ ಹಿನ್ನೆಲೆಯಲ್ಲಿ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ಸ್ಮೃತಿ ಇರಾನಿ ಆಪ್ತನನ್ನು ಆಗಂತುಕರ ಗುಂಡಿಟ್ಟು ಹತ್ಯೆ ಮಾಡಿದ್ದರು.
ಸ್ಮೃತಿ ಇರಾನಿ ಆಪ್ತ ಸುರೇಂದ್ರ ಸಿಂಗ್ ಅವರನ್ನು ಶನಿವಾರ ರಾತ್ರಿ ಆಗಂತುಕರು ಗುಂಡಿಕ್ಕಿ ಹತ್ಯೆ ಮಾಡಿದ್ದರು. ಇಂದು ಸುರೇಂದ್ರ ಸಿಂಗ್ ಅವರ ಶವ ಯಾತ್ರೆ ವೇಳೆ ಆಪ್ತನ ಮೃತದೇಹಕ್ಕೆ ಸ್ಮೃತಿ ಇರಾನಿ ಹೆಗಲು ಕೊಟ್ಟಿದ್ದಾರೆ.
ಸುರೇಂದ್ರ ಸಿಂಗ್ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೋಲೀಸ್ ಇಲಾಖೆ ಹತ್ಯೆಗೆ ಸಂಬಂಧಿಸಿದಂತೆ ಇಬ್ಬರು ಶಂಕಿತರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
#WATCH BJP MP from Amethi, Smriti Irani lends a shoulder to mortal remains of Surendra Singh, ex-village head of Barauli, Amethi, who was shot dead last night. pic.twitter.com/jQWV9s2ZwY