ಮೋದಿಗೆ ಅಮರಿಂದರ್ ಪತ್ರ; ಜಿಎಸ್ ಟಿ ಸರಳೀಕರಣಕ್ಕೆ 101 ಸಲಹೆಗಳು

ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಸರಕು ಮತ್ತು ಸೇವಾ ತೆರಿಗೆ- ಜಿಎಸ್ ಟಿ ಯನ್ನು ಸರಳೀಕೃತಗೊಳಿಸಲು 101 ಸಲಹೆಗಳನ್ನು ನೀಡಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಚಂಡೀಗಢ : ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್   ಸಿಂಗ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಸರಕು ಮತ್ತು ಸೇವಾ ತೆರಿಗೆ- ಜಿಎಸ್ ಟಿ ಯನ್ನು ಸರಳೀಕೃತಗೊಳಿಸಲು 101 ಸಲಹೆಗಳನ್ನು ನೀಡಿದ್ದಾರೆ.

ಪ್ರಧಾನಿ ಮೋದಿ ಅವರಿಗೆ ಗೌಪ್ಯ ಪತ್ರ ಬರೆದಿರುವ ಅಮರಿಂದರ್, ಲೋಕಸಭಾ ಚುನಾವಣೆಯ ದಾಖಲೆಯ ಗೆಲುವಿಗೆ ಅಭಿನಂದನೆ ಸಲ್ಲಿಸಿ, ದೇಶವನ್ನು ಅತ್ಯುನ್ನತ ಪ್ರಗತಿ ಹಾಗೂ ಸಾಮಾಜಿಕ ನ್ಯಾಯದತ್ತ ಕೊಂಡೊಯ್ಯುವ ಅವರ ಧ್ಯೇಯವನ್ನು ಸ್ವಾಗತಿಸಿದ್ದಾರೆ. 
ಕೇಂದ್ರ ಸರ್ಕಾರದ ಕುರಿತು ಪಂಜಾಬ್ ಜನರ ನಿರೀಕ್ಷೆಗಳನ್ನು ಪ್ರಸ್ತಾಪಿಸಿರುವ ಅಮರಿಂದರ್, ದೇಶದ ಜನರು ಹಾಗೂ ತಮ್ಮ ರಾಜ್ಯದ ಸಮೃದ್ಧಿಗಾಗಿ ಪ್ರಧಾನಿ ಮೋದಿಯೊಂದಿಗೆ ಕೈಜೋಡಿಸಿ ಕೆಲಸ ಮಾಡುವ ಆಶಯ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com