ಆರ್‌ಸಿಇಪಿ ಕುರಿತ ಸೋನಿಯಾ ಧಿಡೀರ್ ಎಚ್ಚರಗೊಂಡಿದ್ದೇಕೆ? ಕೇಂದ್ರ ಸಚಿವ ಪಿಯೂಷ್‍ ಗೋಯಲ್ ಪ್ರಶ್ನೆ

ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ(ಆರ್‌ಸಿಇಪಿ) ಒಪ್ಪಂದವನ್ನು  ಅನುಮೋದಿಸುವ ಯಾವುದೇ ಕ್ರಮವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರೋಧಿಸುತ್ತಿರುವುದರ ನಡುವೆಯೇ...
ಪಿಯೂಶ್ ಗೋಯಲ್
ಪಿಯೂಶ್ ಗೋಯಲ್
Updated on

ನವದೆಹಲಿ: ಪ್ರಾದೇಶಿಕ ಸಮಗ್ರ ಆರ್ಥಿಕ ಪಾಲುದಾರಿಕೆ(ಆರ್‌ಸಿಇಪಿ) ಒಪ್ಪಂದವನ್ನು  ಅನುಮೋದಿಸುವ ಯಾವುದೇ ಕ್ರಮವನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ವಿರೋಧಿಸುತ್ತಿರುವುದರ ನಡುವೆಯೇ ಇದ್ದಕ್ಕಿದ್ದಂತೆ ಅವರು ಎಚ್ಚರಗೊಂಡಿರುವುದೇಕೆ? ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಶನಿವಾರ ತಡರಾತ್ರಿ ವಾಗ್ದಾಳಿ ನಡೆಸಿದ್ದಾರೆ.

‘2007 ರಲ್ಲಿ ಭಾರತ-ಚೀನಾ ಎಫ್‌ಟಿಎ(ಮುಕ್ತ ವಾಣಿಜ್ಯ ಒಪ್ಪಂದ) ಬಗ್ಗೆ  ಯುಪಿಎ ಸರ್ಕಾರ ಒಪ್ಪಿಕೊಂಡಾಗ ಸೋನಿಯಾ ಗಾಂಧಿ ಎಲ್ಲಿದ್ದರು? ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರು ತಮಗೆ ಆದ ಈ ಅವಮಾನದ ವಿರುದ್ಧ ಮಾತನಾಡುತ್ತಾರೆ ಎಂದು ನಾನು ಭಾವಿಸುತ್ತೇನೆ,’ ಎಂದು ಗೋಯಲ್ ಸರಣಿ ಟ್ವೀಟ್‌ಗಳಲ್ಲಿ ಬರೆದಿದ್ದಾರೆ.

ಆರ್‌ಸಿಇಪಿ ಒಪ್ಪಂದದಿಂದ ದೇಶಕ್ಕೆ ಮಾರಕ ಎಂದು ಸೋನಿಯಾ ಗಾಂಧಿ ಹೇಳಿಕೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com