'ಮಹಾ' ಸರ್ಕಾರ ರಚನೆ ಬಿಕ್ಕಟ್ಟು: ಫಡ್ನವೀಸ್-ಮೋಹನ್ ಭಾಗವತ್ ಮಹತ್ವದ ಭೇಟಿ

ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಬಿಕ್ಕಟ್ಟು ಮುಂದುವರಿದ ಹಿನ್ನೆಲೆಯಲ್ಲಿ ದೇವೇಂದ್ರ ಫಡ್ನವೀಸ್ ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಅವರನ್ನು ನಾಗಪುರದಲ್ಲಿ ಭೇಟಿ ಮಾಡಿದ್ದಾರೆ.
ದೇವೇಂದ್ರ ಫಡ್ನವೀಸ್ ಮತ್ತು ಮೋಹನ್ ಭಾಗವತ್
ದೇವೇಂದ್ರ ಫಡ್ನವೀಸ್ ಮತ್ತು ಮೋಹನ್ ಭಾಗವತ್
Updated on

ಮುಂಬಯಿ: ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ ಬಿಕ್ಕಟ್ಟು ಮುಂದುವರಿದ ಹಿನ್ನೆಲೆಯಲ್ಲಿ ದೇವೇಂದ್ರ ಫಡ್ನವೀಸ್ ಆರ್ ಎಸ್ ಎಸ್ ಮುಖಂಡ ಮೋಹನ್ ಭಾಗವತ್ ಅವರನ್ನು ನಾಗಪುರದಲ್ಲಿ ಭೇಟಿ ಮಾಡಿದ್ದಾರೆ.

ರಾತ್ರಿ ಸುಮಾರು 9.25ರ ವೇಳೆಗೆ ನಾಗಪುರದ ಆರ್ ಎಸ್ ಎಸ್ ಪ್ರಮುಖ ಕಚೇರಿಗೆ ಆಗಮಿಸಿದ ದೇವೇಂದ್ರ ಫಡ್ನವೀಸ್ ಸುಮಾರು ಒಂದೂವರೆ ಗಂಟೆ ಕಾಲ ಚರ್ಚೆ ನಡೆಸಿದ್ದಾರೆ.

ಆದರೆ ಈ ಮಾತುಕತೆ ಬಗ್ಗೆ ಆರ್ ಎಸ್ ಎಸ್ ಕಾರ್ಯಕರ್ತರು ಯಾವುದೇ ಮಾಹಿತಿ ನೀಡುತ್ತಿಲ್ಲ, ಮಹಾರಾಷ್ಟ್ರ ಸರ್ಕಾರ ರಚನೆಯಲ್ಲಿ ಉಂಟಾಗಿರುವ ಬಿಕ್ಕಟ್ಟಿನಲ್ಲಿ ಈ ಚರ್ಚೆ ನಡೆಸಿರಬಹುದು ಎಂದು ಹೇಳಲಾಗುತ್ತಿದೆ. 

ಮಹರಾಷ್ಟ್ರ ಸರ್ಕಾರ ರಚನೆ ಸಂಬಂಧ ಶೀಘ್ರದಲ್ಲೇ ಸಿಹಿಸುದ್ದಿ ಬರಲಿದೆ ಎಂದು ಹಣಕಾಸು ಸಚಿವ ಸುಧೀರ್ ಮುಂಗತಿವಾರ್ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com