ಪ್ರಯಾಣಿಕರ ಗಮನಕ್ಕೆ: ವಾರಾಣಸಿ ರೈಲು ನಿಲ್ದಾಣದಲ್ಲಿ ಇನ್ನು ಮುಂದೆ ದಕ್ಷಿಣ ಭಾರತೀಯ ಭಾಷೆಗಳಲ್ಲಿ ಪ್ರಕಟಣೆ! 

ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಇನ್ನು ಮುಂದಿನ ದಿನಗಳಲ್ಲಿ ದಕ್ಷಿಣ ಭಾರತೀಯ ಭಾಷೆಗಳಲ್ಲೂ ಪ್ರಕಟಣೆಗಳು ಲಭ್ಯವಾಗಲಿವೆ. 
ಪ್ರಯಾಣಿಕರ ಗಮನಕ್ಕೆ: ವಾರಾಣಸಿ ರೈಲು ನಿಲ್ದಾಣದಲ್ಲಿ ಇನ್ನು ಮುಂದೆ ದಕ್ಷಿಣ ಭಾರತೀಯ ಭಾಷೆಗಳಲ್ಲಿ ಪ್ರಕಟಣೆ!
ಪ್ರಯಾಣಿಕರ ಗಮನಕ್ಕೆ: ವಾರಾಣಸಿ ರೈಲು ನಿಲ್ದಾಣದಲ್ಲಿ ಇನ್ನು ಮುಂದೆ ದಕ್ಷಿಣ ಭಾರತೀಯ ಭಾಷೆಗಳಲ್ಲಿ ಪ್ರಕಟಣೆ!
Updated on

ಪ್ರಧಾನಿ ನರೇಂದ್ರ ಮೋದಿ ಪ್ರತಿನಿಧಿಸುವ ವಾರಾಣಸಿ ಲೋಕಸಭಾ ಕ್ಷೇತ್ರದಲ್ಲಿ ಇನ್ನು ಮುಂದಿನ ದಿನಗಳಲ್ಲಿ ದಕ್ಷಿಣ ಭಾರತೀಯ ಭಾಷೆಗಳಲ್ಲೂ ಪ್ರಕಟಣೆಗಳು ಲಭ್ಯವಾಗಲಿವೆ. 

ತಮಿಳು, ತೆಲುಗು, ಮಲಯಾಳಂ, ಕನ್ನಡ ಭಾಷೆಗಳಲ್ಲಿ ಇನ್ನು ಮುಂದೆ ವಾರಾಣಸಿ ರೈಲು ನಿಲ್ದಾಣದಲ್ಲಿ ಪ್ರಕಟಣೆಗಳನ್ನು ಕೇಳಬಹುದಾಗಿದೆ.

ಪವಿತ್ರ ಕ್ಷೇತ್ರವಾಗಿರುವ ವಾರಾಣಸಿಗೆ ಹಿಂದಿಯೇತರ ಭಾಷೆಗಳನ್ನು ಮಾತನಾಡುವ ಯಾತ್ರಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಾರೆ, ಅವರಿಗೆಲ್ಲರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದ್ದು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಪ್ರಾದೇಶಿಕ ವಿಭಾಗದ ನಿರ್ದೇಶಕ ಆನಂದ್ ಮೋಹನ್ ಹೇಳಿದ್ದಾರೆ. 

ಪ್ರಾರಂಭಿಕ ಹಂತದಲ್ಲಿ ತಮಿಳು, ಮಲಯಾಳಂ, ಕನ್ನಡ, ತೆಲುಗು ಭಾಷೆಗಳಲ್ಲಿ ಪ್ರಕಟಣೆಗಳನ್ನು ಹೊರಡಿಸಲಾಗುತ್ತದೆ. ತಿಂಗಳಾಂತ್ಯಕ್ಕೆ ಒಡಿಯಾ, ಮರಾಠಿ ಭಾಷೆಗಳಲ್ಲಿಯೂ ಪ್ರಕಟಣೆ ಲಭ್ಯವಾಗಲಿದೆ ಎಂದು ಆನಂದ್ ಮೋಹನ್ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com