ರಜನಿಕಾಂತ್ ಬಿಜೆಪಿ ಸೇರಿಲ್ಲ: ಮುರಳೀಧರ್ ರಾವ್ ಸ್ಪಷ್ಟನೆ

ಖ್ಯಾತ ತಮಿಳು ನಟ ರಜನಿಕಾಂತ್ ಅವರು ಬಿಜೆಪಿ ಸೇರಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.
ಮುರಳೀಧರ್ ರಾವ್ - ರಜನಿಕಾಂತ್
ಮುರಳೀಧರ್ ರಾವ್ - ರಜನಿಕಾಂತ್
Updated on

ಚೆನ್ನೈ: ಖ್ಯಾತ ತಮಿಳು ನಟ ರಜನಿಕಾಂತ್ ಅವರು ಬಿಜೆಪಿ ಸೇರಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಿ ಮುರಳೀಧರ್ ರಾವ್ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ರಜನಿಕಾಂತ್ ಅವರ ಬಗ್ಗೆ ಯಾವುದೇ ತಪ್ಪು ಕಲ್ಪನೆ ಇಲ್ಲ. ಅವರು ಬಿಜೆಪಿ ಸೇರಿದ್ದಾರೆ ಎಂದು ನಾವು ಯಾವತ್ತೂ ಹೇಳಿಲ್ಲ ಮತ್ತು ಅವರು ಬಿಜೆಪಿ ಸೇರಲು ಸಿದ್ಧರಿದ್ದಾರೆ ಎಂದು ಸಹ ಹೇಳಿಲ್ಲ ಎಂದು ಮುರಳೀಧರ್ ರಾವ್ ಅವರು ಹೇಳಿದ್ದಾರೆ.

ಇತ್ತೀಚಿಗೆ ಹೊಸದಾಗಿ 6 ಕೋಟಿ ಜನ ಬಿಜೆಪಿ ಸದಸ್ಯತ್ವ ಪಡೆದಿದ್ದಾರೆ. ಇದರೊಂದಿಗೆ ನಮ್ಮ ಪಕ್ಷದ ಸದಸ್ಯರ ಸಂಖ್ಯೆ 17 ರಿಂದ 18 ಕೋಟಿಗೆ ಏರಿಕೆಯಾಗಿದೆ ಎಂದರು.

ಇಂದು ಬೆಳಗ್ಗೆಯಷ್ಟೇ ಹಿರಿಯ ನಟ ರಜನಿಕಾಂತ್ ಅವರು, ತಿರುವಳ್ಳುವರ್ ಜೊತೆಗೆ ತಮ್ಮನ್ನು ಕೇಸರಿ ಕರಣಗೊಳಿಸುವ ಪ್ರಯತ್ನ ನಡೆಯುತ್ತಿದೆ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಇತ್ತೀಚಿಗೆ ತಮಿಳಿನ ಸಂತ ಕವಿ ತಿರುವಳ್ಳುವರ್ ಪ್ರತಿಮೆಗೆ ಕೇಸರಿಕರಣಗೊಳಿಸಿದ ಬಗ್ಗೆ ಪ್ರತಿಕ್ರಿಯಿಸಿದ ಸೂಪರ್ ಸ್ಟಾರ್ ರಜನಿಕಾಂತ್, ತಿರುವಳ್ಳುವರ್ ಜೊತೆಗೆ  ತಮ್ಮನ್ನು ಕೇಸರಿಕರಣಗೊಳಿಸುವ  ಪ್ರಯತ್ನ ಮಾಡಲಾಗುತ್ತಿದೆ ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com