ಮಿಲಿಂದ್ ಡಿಯೋರಾ
ದೇಶ
ರಾಜ್ಯಪಾಲರು ಎನ್ ಸಿಪಿ-ಕಾಂಗ್ರೆಸ್ ಗೆ ಕೂಡ ಸರ್ಕಾರ ರಚನೆಗೆ ಆಹ್ವಾನ ನೀಡಬೇಕು: ಮಿಲಿಂದ್ ಡಿಯೋರಾ
ಮಹಾರಾಷ್ಟ್ರದಲ್ಲಿ ಎರಡನೇ ಅತಿದೊಡ್ಡ ಮೈತ್ರಿಪಕ್ಷವಾಗಿ ಹೊರಹೊಮ್ಮಿರುವ ಎನ್ ಸಿಪಿ ಮತ್ತು ಕಾಂಗ್ರೆಸ್ ನ್ನು ಕೂಡ ಸರ್ಕಾರ ರಚಿಸಲು ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಆಹ್ವಾನಿಸಬೇಕು ಎಂದು ಕಾಂಗ್ರೆಸ್ ನಾಯಕ ಮಿಲಿಂದ್ ದಿಯೊರಾ ಹೇಳಿದ್ದಾರೆ.
ಮುಂಬೈ: ಮಹಾರಾಷ್ಟ್ರದಲ್ಲಿ ಎರಡನೇ ಅತಿದೊಡ್ಡ ಮೈತ್ರಿಪಕ್ಷವಾಗಿ ಹೊರಹೊಮ್ಮಿರುವ ಎನ್ ಸಿಪಿ ಮತ್ತು ಕಾಂಗ್ರೆಸ್ ನ್ನು ಕೂಡ ಸರ್ಕಾರ ರಚಿಸಲು ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಆಹ್ವಾನಿಸಬೇಕು ಎಂದು ಕಾಂಗ್ರೆಸ್ ನಾಯಕ ಮಿಲಿಂದ್ ದಿಯೊರಾ ಹೇಳಿದ್ದಾರೆ.
ಬಿಜೆಪಿ-ಶಿವಸೇನೆ ಸರ್ಕಾರ ರಚಿಸಲು ನಿರಾಕರಿಸಿರುವುದರಿಂದ ಎರಡನೇ ಅತಿದೊಡ್ಡ ಮೈತ್ರಿಪಕ್ಷವಾಗಿ ಹೊರಹೊಮ್ಮಿರುವ ಎನ್ ಸಿಪಿ-ಕಾಂಗ್ರೆಸ್ ನ್ನು ಕೂಡ ಸರ್ಕಾರ ರಚನೆಗೆ ರಾಜ್ಯಪಾಲರು ಆಹ್ವಾನಿಸಬೇಕು ಎಂದು ದಿಯೊರಾ ಟ್ವೀಟ್ ಮಾಡಿದ್ದಾರೆ.
ನಿನ್ನೆ ಭಾರತೀಯ ಜನತಾ ಪಾರ್ಟಿಗೆ ಸರ್ಕಾರ ರಚಿಸಲು ಸಾಧ್ಯವಿದೆಯೇ ಎಂದು ಪರಿಶೀಲಿಸಿ ಎಂದು ರಾಜ್ಯಪಾಲರು ಆಹ್ವಾನ ನೀಡಿದ್ದರು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ