2021ರ ವಿಧಾನಸಭೆ ಚುನಾವಣೆಯಲ್ಲಿ ಪವಾಡ ನಡೆಯಲಿದೆ: ಚುನಾವಣಾ ರಾಜಕೀಯದ ಸುಳಿವು ನೀಡಿದ ರಜನಿ

2021ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಪವಾಡ ನಡೆಯಲಿದೆ ಮತ್ತು ತಮಿಳು ಜನ ಅಂತಹ ಅದ್ಭುತ ಸೃಷ್ಟಿಸಲಿದ್ದಾರೆ ಎಂದು ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ಗುರುವಾರ ಹೇಳಿದ್ದಾರೆ.
ರಜನಿಕಾಂತ್
ರಜನಿಕಾಂತ್

ಚೆನ್ನೈ: 2021ರಲ್ಲಿ ನಡೆಯಲಿರುವ ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಪವಾಡ ನಡೆಯಲಿದೆ ಮತ್ತು ತಮಿಳು ಜನ ಅಂತಹ ಅದ್ಭುತ ಸೃಷ್ಟಿಸಲಿದ್ದಾರೆ ಎಂದು ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ಗುರುವಾರ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಆಧ್ಯಾತ್ಮಿಕ ರಾಜಕೀಯಕ್ಕೆ ಅವಕಾಶ ಇಲ್ಲ ಎಂಬ ಮೀನುಗಾರಿಕೆ ಸಚಿವ ಡಿ ಜಯಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ರಜನಿಕಾಂತ್, 2021ರಲ್ಲಿ ತಮಿಳುನಾಡಿನ ಜನ ಒಂದು ದೊಡ್ಡ ಪವಾಡ ಸೃಷ್ಟಿಸಲಿದ್ದಾರೆ. ಇದು ಶೇ.100ರಷ್ಟು ಖಚಿತ ಎಂದು ಹೇಳುವ ಮೂಲಕ 2021ರಲ್ಲಿ ಚುನಾವಣಾ ಅಖಾಡಕ್ಕಿಳಿಯುವ ಸೂಚನೆ ನೀಡಿದ್ದಾರೆ.

ಚೆನ್ನೈ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತಮಿಳು ಹಿರಿಯ ನಟ, ರಾಜಕಾರಣದಲ್ಲಿ ಅದ್ಭುತಗಳು ಮತ್ತು ಪವಾಡಗಳು ಸಂಭವಿಸುತ್ತಲೇ ಇರುತ್ತವೆ ಎಂದು ಹೇಳಿದ್ದಾರೆ.

ಇನ್ನು ರಜನಿಕಾಂತ್ ಹೇಳಿಕೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಇಕೆ ಪಳನಿಸ್ವಾಮಿ ಅವರು, ಅವರು ಯಾವ ಪವಾಡದ ಬಗ್ಗೆ ಮಾತನಾಡಿದ್ದಾರೆ ಎಂಬುದು ನನಗೆ ಗೊತ್ತಿಲ್ಲ ಮತ್ತು ಯಾವ ಆಧಾರದ ಮೇಲೆ ಪವಾಡ ನಡೆಯುತ್ತದೆ ಎಂಬುದು ನನಗೆ ಗೊತ್ತಿಲ್ಲ. 2021ರಲ್ಲಿ ಮತ್ತೆ ಎಐಎಡಿಎಂಕೆ ಮತ್ತೆ ಅಧಿಕಾರಕ್ಕೆ ಬರುತ್ತದೆ ಮತ್ತು ಇದು ಪವಾಡಕ್ಕಾಗಿ ನಾನು ಕಾಯುತ್ತಿದ್ದೇವೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com