ಮಹಾರಾಷ್ಟ್ರದಲ್ಲಿ ಸರ್ಕಾರ ರಚನೆ: ರಾಷ್ಟ್ರಪತಿ ಆಡಳಿತ ಹಿಂಪಡೆತ 

ರಾತ್ರೋರಾತ್ರಿ ನಡೆದ ರಾಜಕೀಯ ಬೆಳವಣಿಗೆ ನಂತರ ಶನಿವಾರ ಬೆಳಗ್ಗೆ ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್ ಸಿಪಿ ನೇತೃತ್ವದ ಸರ್ಕಾರ ರಚನೆಯಾಗಿದೆ.
ಗವರ್ನರ್ ಭಗತ್ ಸಿಂಗ್ ಕೊಶ್ಯಾರಿ
ಗವರ್ನರ್ ಭಗತ್ ಸಿಂಗ್ ಕೊಶ್ಯಾರಿ
Updated on

ನವದೆಹಲಿ: ರಾತ್ರೋರಾತ್ರಿ ನಡೆದ ರಾಜಕೀಯ ಬೆಳವಣಿಗೆ ನಂತರ ಶನಿವಾರ ಬೆಳಗ್ಗೆ ಮಹಾರಾಷ್ಟ್ರದಲ್ಲಿ ಬಿಜೆಪಿ-ಎನ್ ಸಿಪಿ ನೇತೃತ್ವದ ಸರ್ಕಾರ ರಚನೆಯಾಗಿದೆ. ಇದರಿಂದಾಗಿ 10 ದಿನಗಳ ಹಿಂದೆ ಹೇರಿಕೆಯಾಗಿದ್ದ ರಾಷ್ಟ್ರಪತಿ ಆಡಳಿತ ಇಂದು ಬೆಳಗ್ಗೆ 5.47ಕ್ಕೆ ಹಿಂಪಡೆಯಲಾಗಿದೆ. 


ರಾಷ್ಟ್ರಪತಿ ರಾಮನಾಥ್ ಕೋವಿಂದ್ ಗೃಹ ಸಚಿವಾಲಯಕ್ಕೆ ಅಧಿಸೂಚನೆ ಹೊರಡಿಸಿದ್ದು ರಾಷ್ಟ್ರಪತಿ ಆಡಳಿತವನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಣೆ ಮಾಡಿದ್ದಾರೆ. ಈ ಸಂಬಂಧ ಗೆಜೆಟ್ ಅಧಿಸೂಚನೆಯನ್ನು ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಬಲ್ಲಾ ಇಂದು ಬೆಳಗ್ಗೆ 5.47ಕ್ಕೆ ಹೊರಡಿಸಿದ್ದಾರೆ.


ರಾಷ್ಟ್ರಪತಿ ಆಡಳಿತ ಹೇರಿಕೆ ಹಿಂಪಡೆದ ನಂತರ ಸಿಎಂ ಆಗಿ ದೇವೇಂದ್ರ ಫಡ್ನವಿಸ್ ಮತ್ತು ಡಿಸಿಎಂ ಆಗಿ ಅಜಿತ್ ಪವಾರ್ ಪ್ರಮಾಣವಚನ ಸ್ವೀಕರಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com