ಎನ್ ಸಿಪಿ ಶಾಸಕ ಕಾಣೆ; ಮಹಾರಾಷ್ಟ್ರದ ಶಹಪುರ ಠಾಣೆಯಲ್ಲಿ ದೂರು ದಾಖಲು 

ಮಹಾರಾಷ್ಟ್ರದಲ್ಲಿ ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಅಜಿತ್ ಪವಾರ್ ನೇತೃತ್ವದಲ್ಲಿ ಎನ್ ಸಿಪಿಯ ಹಲವು ಶಾಸಕರು ಬಿಜೆಪಿಗೆ ಸರ್ಕಾರ ರಚನೆ ಮಾಡಲು ಬೆಂಬಲ ನೀಡಿದ ನಂತರ ಕಾಣೆಯಾದ ಶಾಸಕರೊಬ್ಬರ ವಿರುದ್ಧ ಕೇಸು ದಾಖಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮುಂಬೈ: ಮಹಾರಾಷ್ಟ್ರದಲ್ಲಿ ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಅಜಿತ್ ಪವಾರ್ ನೇತೃತ್ವದಲ್ಲಿ ಎನ್ ಸಿಪಿಯ ಹಲವು ಶಾಸಕರು ಬಿಜೆಪಿಗೆ ಸರ್ಕಾರ ರಚನೆ ಮಾಡಲು ಬೆಂಬಲ ನೀಡಿದ ನಂತರ ಕಾಣೆಯಾದ ಶಾಸಕರೊಬ್ಬರ ವಿರುದ್ಧ ಕೇಸು ದಾಖಲಾಗಿದೆ.


ನಿನ್ನೆ ಬೆಳಗ್ಗೆ ರಾಜಭವನದಲ್ಲಿ ದೇವೇಂದ್ರ ಫಡ್ನವಿಸ್ ಮತ್ತು ಅಜಿತ್ ಪವಾರ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ವೇಳೆ ಶಹಪುರ ಎನ್ ಸಿಪಿ ಶಾಸಕ ದೌಲತ್ ದರೊಡ ಅವರು ರಾಜಭವನಕ್ಕೆ ಬಂದ ನಂತರ ಕಾಣೆಯಾದರು. ಮೊನ್ನೆ ಶುಕ್ರವಾರ ರಾತ್ರಿ ದರೊಡ ತಮ್ಮ ಕ್ಷೇತ್ರದ ಪಕ್ಕದ ಥಾಣೆಯಿಂದ ತಮ್ಮ ಪುತ್ರ ಕರಣ್ ಜೊತೆ ಮುಂಬೈಗೆ ಬಂದಿದ್ದರು. ಮುಂಬೈಗೆ ಬಂದ ನಂತರ ಅವರ ಪತ್ತೆಯಾಗಿಲ್ಲ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.


ಮಾಜಿ ಶಾಸಕ ಪಾಂಡುರಂಗ ಬರೊರ ಶಹಪುರ ಪೊಲೀಸ್ ಠಾಣೆಯಲ್ಲಿ ದರೊಡ ಅವರು ಕಾಣೆಯಾಗಿದ್ದಾರೆ ಎಂದು ಕೇಸು ದಾಖಲಿಸಿದ್ದಾರೆ. 


ಈ ಮಧ್ಯೆ ನಿನ್ನೆ ಮುಂಬೈಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಕರಣ್, ನಿನ್ನೆ ಬೆಳಗ್ಗೆಯಿಂದ ತಂದೆ ನಮ್ಮ ಸಂಪರ್ಕಕ್ಕೂ ಸಿಗುತ್ತಿಲ್ಲ. ಎಲ್ಲಿ ಹೋಗಿದ್ದಾರೆ ಎಂದು ನಮಗೂ ಗೊತ್ತಿಲ್ಲ. ಅವರು ಶರದ್ ಪವಾರ್ ಪರವಾಗಿ ಇರಬೇಕೆಂದು ನಮ್ಮ ಆಸೆ ಕೂಡ ಆಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com