18 ಕೋಟಿ ರೂ. ವಂಚನೆ ಪ್ರಕರಣ: ಟಿವಿ 9 ಮಾಜಿ ಸಿಇಒ ರವಿ ಪ್ರಕಾಶ್ ಬಂಧನ

ಟಿವಿ 9 ವಾಹಿನಿ ಪ್ರವರ್ತಕ ಸಂಸ್ಥೆಯಾದ ಅಸೋಸಿಯೇಟೆಡ್ ಬ್ರಾಡ್‌ಕಾಸ್ಟಿಂಗ್ ಕಂಪೆನಿ (ಎಬಿಸಿಎಲ್)ಯ 18 ಕೋಟಿ ರೂ. ಹಣವನ್ನು ಸ್ವಂತಕ್ಕೆ ಬಳಸಿಕೊಂಡ ಆರೋಪದ ಮೇಲೆ  ಬಹುಭಾಷಿಕ ಸುದ್ದಿವಾಹಿನಿ ಟಿವಿ 9 ಮಾಜಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವಿ ಪ್ರಕಾಶ್‌ ಅವರನ್ನು ಇಲ್ಲಿನ ಬಂಜಾರ ಹಿಲ್ಸ್ ಪೊಲೀಸರು ಬಂಧಿಸಿದ್ದಾರೆ.
ರವಿ ಪ್ರಕಾಶ್
ರವಿ ಪ್ರಕಾಶ್
Updated on

ಹೈದರಾಬಾದ್: ಟಿವಿ 9 ವಾಹಿನಿ ಪ್ರವರ್ತಕ ಸಂಸ್ಥೆಯಾದ ಅಸೋಸಿಯೇಟೆಡ್ ಬ್ರಾಡ್‌ಕಾಸ್ಟಿಂಗ್ ಕಂಪೆನಿ (ಎಬಿಸಿಎಲ್)ಯ 18 ಕೋಟಿ ರೂ. ಹಣವನ್ನು ಸ್ವಂತಕ್ಕೆ ಬಳಸಿಕೊಂಡ ಆರೋಪದ ಮೇಲೆ  ಬಹುಭಾಷಿಕ ಸುದ್ದಿವಾಹಿನಿ ಟಿವಿ 9 ಮಾಜಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ರವಿ ಪ್ರಕಾಶ್‌ ಅವರನ್ನು ಇಲ್ಲಿನ ಬಂಜಾರ ಹಿಲ್ಸ್ ಪೊಲೀಸರು ಬಂಧಿಸಿದ್ದಾರೆ. 

ಭಾರತೀಯ ದಂಡ ಸಂಹಿತೆಯ ವಿವಿಧ ಕಲಂಗಳ ಅಡಿ ವಂಚನೆ ಮತ್ತು ಅಪರಾಧ ಉಲ್ಲಂಘನೆ ಸೇರಿದಂತೆ ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತಂತೆ ಎಬಿಸಿಎಲ್‌ನ ಹೊಸ ಆಡಳಿತ ಮಂಡಳಿ ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.ಎಬಿಸಿಎಲ್‌ನಮಾಜಿ ಮುಖ್ಯ ಹಣಕಾಸು ಅಧಿಕಾರಿ ಎಂ.ಕೆ.ವಿ.ಎನ್ ಮೂರ್ತಿಯನ್ನೂ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com