ಉತ್ತರ ಪ್ರದೇಶ: ತಾಯಿ, ಪತ್ನಿ ಕಿರುಕುಳಕ್ಕೆ ಬೇಸತ್ತು 40 ವರ್ಷದ ವ್ಯಕ್ತಿ ಆತ್ಯಹತ್ಯೆಗೆ ಶರಣು

ಪತ್ನಿ ಹಾಗೂ ತಾಯಿಯ ಕಿರುಕುಳಕ್ಕೆ ಬೇಸತ್ತು 40 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಜನಸಾಥ್ ನಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮುಜಾಫರ್ ನಗರ: ಪತ್ನಿ ಹಾಗೂ ತಾಯಿಯ ಕಿರುಕುಳಕ್ಕೆ ಬೇಸತ್ತು 40 ವರ್ಷದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯ ಜನಸಾಥ್ ನಲ್ಲಿ ನಡೆದಿದೆ.

ಅಹ್ರೋಡ ಗ್ರಾಮದ ಗುಜ್ಜರ್ ಸದ್ಭಾವನಾ ಸಮಾಜದ ಜಿಲ್ಲಾ ಕಾರ್ಯದರ್ಶಿಯಾಗಿದ್ದ ಸತೀಶ್ ಭದನ ಅವರು ಪತ್ನಿ ಹಾಗೂ ತಾಯಿಯ ಕಿರುಕುಳ ತಾಳಲಾರದೇ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸತೀಶ್ ಅವರು ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾರೆ ಮತ್ತು ಅದನ್ನು ವಾಟ್ಸ್ ಆಪ್ ನಲ್ಲೂ ಪೋಸ್ಟ್ ಮಾಡಿದ್ದಾರೆ ಎಂದು ಪೊಲೀಸ್ ಠಾಣಾ ಅಧಿಕಾರಿ ಯೋಗೇಶ್ ಶರ್ಮಾ ಅವರು ಹೇಳಿದ್ದಾರೆ.

ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com